
<p>Mahantesh Bilagi Death: ಕಲಬುರಗಿಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಅಪಘಾತವಾಗಿದ್ದು, ಕಾರ್ನಲ್ಲಿದ್ದ ನಾಲ್ವರು ನಿಧನರಾಗಿದ್ದಾರೆ. ಅವರಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಕೂಡ ಒಬ್ರು. ಇವರು ದಕ್ಷ ಅಧಿಕಾರಿಯಾಗಿದ್ದರು.</p><img><p>ಡ್ರೈವರ್ ಅತಿವೇಗವಾಗಿ ಕಾರ್ ಓಡಿಸುತ್ತಿದ್ದರು. ಬೈಕ್ ಬಂದಿದ್ದು, ಅವರನ್ನು ತಪ್ಪಿಸಲು ಹೋಗಿ ಕಾರ್ ಮೂರು ನಾಲ್ಕು ಬಾರಿ ಪಲ್ಟಿ ಆಗಿದೆ. ಆಸ್ಪತ್ರೆಯಲ್ಲಿ ಮಹಾಂತೇಶ್ ಅವರು ನಿಧನರಾಗಿದ್ದಾರೆ.</p><img><p>ಕಾರ್ ಚಾಲಕ ಆಂಥೋನಿ ರಾಜ್ ಅವರಿಗೂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ವಿರುದ್ಧ ದೂರು ದಾಖಲಾಗಿದೆ. ಬಸವರಾಜ್ ಕಮರಟಗಿ ಎನ್ನುವವರು ಜೇವರ್ಗಿ ಠಾಣೆಯಲ್ಲಿ ಡ್ರೈವರ್ ವಿರುದ್ಧ ದೂರು ದಾಖಲಿಸಿದ್ದಾರೆ.</p><img><p>ಮಹಾಂತೇಶ್ ಬೀಳಗಿ ಅವರ ಚಿಕ್ಕಪ್ಪನ ಮಕ್ಕಳಾದ ಈರಣ್ಣ ಬೀಳಗಿ, ಶಂಕರ ಬೀಳಗಿ, ಸ್ನೇಹಿತ ಈರಣ್ಣ ಸರಸಂಗಿ ಅವರು ನಿಧನರಾಗಿದ್ದಾರೆ.</p><img><p>ಶಂಕರ್ ಅವರು ಒಂದು ತಿಂಗಳ ಹಿಂದೆ ಅವಳಿ ಮಕ್ಕಳು ಹುಟ್ಟಿದ್ದರು. ಆ ಮಕ್ಕಳಿಗೆ ನಾಮಕರಣ ಮಾಡಿಲ್ಲ. ಇಡೀ ಊರಿಗೆ 150kg ಪೇಡೆ ಹಚ್ಚಿದ್ದರು.</p><img><p>ಮಹಾಂತೇಶ್ ಅವರು ಹಣೆಗೆ ವಿಭೂತಿ ಹಚ್ಚಿಯೇ ಮನೆಯಿಂದ ಹೊರಗಡೆ ಬರುತ್ತಿದ್ದರು. ಈ ರೀತಿ ಕಾಣಸಿಗೋದು ಅಪರೂಪ.</p><p>ಬಡತನದಲ್ಲಿ ಬೆಳೆದ ಮಹಾಂತೇಶ್ ಅವರು ಡಿಪ್ರೆಶನ್ಗೆ ಜಾರಿ, ಅದನ್ನು ಗೆದ್ದು ಕೆಎಎಸ್ ಆಫೀಸರ್ ಆಗಿದ್ದರು, ಆಮೇಲೆ ಬಡ್ತಿ ಪಡೆದರು.</p><p>ಸಾಕಷ್ಟು ಜನರಿಗೆ ಅವರು ಸಹಾಯ ಮಾಡಿದ್ದಾರೆ. ಇಂದು ಕೂಡ ಜನರು ಅವರ ಸಹಾಯವನ್ನು ಸ್ಮರಿಸುತ್ತಾರೆ. </p>
Source link
Mahantesh Bilagi Death: ತಿಂಗಳ ಹಿಂದೆ ಅವಳಿ ಮಕ್ಕಳು ಹುಟ್ಟಿದ್ದಕ್ಕೆ 150kg ಪೇಡೆ ಹಂಚಿದ್ದ ಶಂಕರ್