ಬೆಳಗಾವಿ, ನವೆಂಬರ್ 25: ಕಾರು ಅಪಘಾತದಲ್ಲಿ ಐಇಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಲಬುರಗಿಯಿಂದ ರಾಮದುರ್ಗಕ್ಕೆ ಅವರ ಪಾರ್ಥಿವ ಶರೀರವನ್ನು ತರಲಾಯಿತು, ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಾಂತೇಶ್ ಬೀಳಗಿ ಅವರ ತಂಗಿ ಅಣ್ಣನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಎದ್ದುಬಾರೋ ಅಣ್ಣ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಲಬುರಗಿಯ ಜೇವರ್ಗಿ ಬಳಿ ಕಾರಿಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ನಡೆದಿತ್ತು. ಘಟನೆಯಲ್ಲಿ ಮಹಾಂತೇಶ ಬೀಳಗಿ ಸೇರಿ ನಿನ್ನೆ ಕಾಣಿಸಿಕೊಂಡಿದ್ದಾರೆ ಇವತ್ತು ಮತ್ತೊಬ್ಬ ಗಾಯಾಳು ಅಸುನೀಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.