
ದಾವಣಗೆರೆ, (ಏಪ್ರಿಲ್ 06): ಮನೆಯಲ್ಲಿ ಇವರ ತಾತ ಇದ್ದಾಗ ಎಂಎಲ್ ಎ , ಮಂತ್ರಿ. ಈಗ ಮತ್ತೆ ಮಗ ಶಾಸಕ ಆದರೆ ದಾವಣಗೆರೆ ಅಕ್ಕ ಪಕ್ಕದ ಕ್ಷೇತ್ರದಲ್ಲಿ ಅವರದೇ ಟಿಕೆಟ್ ಕೊಟ್ಟು ಇಡೀ ದಾವಣಗೆರೆ (ದಾವಣಗೆರೆ) ಕಬ್ಜಾ ಮಾಡಿಕೊಳ್ಳುತ್ತಾರೆ. ಈ ಹುಡುಗ ಗೆದ್ದರೆ ಹಿ ಈಸ್ ಅ ಸ್ಮಾಲ್ ಬಾಯ್. ಕಾಂಗ್ರೆಸ್ ಪಕ್ಷದವರು ಬಾಗಲಕೋಟೆಯಲ್ಲಿ ಅಹಿಂದ , ಇಲ್ಲಿ ಗೋವಿಂದ. ಟೇಕನ್ ಫಾರ್ ಗ್ರಾಂಟೆಡ್ ಇವರದ್ದು. ಇಲ್ಲಿ ಯಾರೂ ಸಮರ್ಥರಿರಲಿಲ್ಲವಾ? ನಿಮ್ಮ ಮನೆ ತನಕ್ಕೆ ಆಗಬೇಕಿತ್ತಾ? ಅಲ್ಲಿ ಪ್ರಿಯಾಂಕಾ ಗಾಂಧಿ ಮಗನಿಗೂ ಕ್ಷೇತ್ರ ಹುಡುಕುತ್ತಿದ್ದಾರೆ. ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (ಪ್ರಹ್ಲಾದ ಜೋಶಿ) ಕಾಂಗ್ರೆಸ್ ಕುಟುಂಬದ ವಿರುದ್ಧ ವಾಗ್ದಾಳಿ.
ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ದಾವಣಗೆರೆಯಲ್ಲಿ ಸಿದ್ದೇಶ್ವರ್ ಅವರ ಕಾಲದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಆಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು. ಆ ಹುಡುಗನಿಗೆ ಈ ಸಲ ಗೆಲುವು ಕೊಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಕಾಂಗ್ರೆಸ್ ನವರಿಗೂ ನಾನು ಕರೆ ಕೊಡುತ್ತೇನೆ, ಆ ಹುಡುಗನನ್ನ (ಸಮರ್ಥ ಶಾಮನೂರು) ಸೋಲಿಸಿ ಎಂದು ಕರೆ ನೀಡಿದರು.
ಅನ್ನಭಾಗ್ಯ ಅಕ್ಕಿ ಒಂದು ಅಕ್ಕಿ ಕೊಡಲಿಲ್ಲ. ನಾವು ಕೊಡುವ ಅಕ್ಕಿಯನ್ನು ಕೊಡುತ್ತಿದ್ದೇವೆ. ಎಲ್ ಪಿ ಜಿ ಗ್ಯಾಸ್ ತೊಂದರೆ ಇದೆ. ಆದರೆ ಗೃಹ ಬಳಕೆಗೆ ಯಾವುದೇ ಸಮಸ್ಯೆ ಇಲ್ಲ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರ ಹೇಳಿಕೆ ನೀವು ಕೇಳಿದ್ದೀರಿ. ಇನ್ನೆರಡು ದಿನಗಳಲ್ಲಿ ಪೆಟ್ರೋಲ್ ಸಿಗಲ್ಲ ಎಂದು ಹೇಳಿದ್ದಾರೆ. ನಿಮಗೆ ಪೆಟ್ರೋಲ್ ಸಿಕ್ಕಿಲ್ಲ ಅಂದರೆ ನಮಗೆ ಹೇಳಿ. ಶೇ 70ರಷ್ಟು ಪೆಟ್ರೀಲ್ ನಮ್ಮಲ್ಲಿ ಸ್ಟಾಕ್ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ತಿರುಗೇಟು ನೀಡಿದೆ.