ಚಿಕ್ಕಬಳ್ಳಾಪುರ, (ಜನವರಿ 07): ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ (ಸಹೋದರ ಮತ್ತು ಸಹೋದರಿ) ಪವಿತ್ರ ಸಂಬಂಧಕ್ಕೆ ವಿರುದ್ಧವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್ನಲ್ಲಿ ಒಬ್ಬರು. ಆದರೆ, ಇದೀಗ ಆಕೆ ಏಕಾಏಕಿ ಶವವಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಇರುವ ಘಟನೆ ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ರಾಮಕೃಷ್ಣಪುರದ ನಿವಾಸಿಗಳಾದ ರಾಮಲಕ್ಷ್ಮಿ ಹಾಗೂ ಕೃಷ್ಣ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ರಾಮಕೃಷ್ಣಪುರದ ನಿವಾಸಿಗಳಾಗಿದ್ದು, ಸಂಬಂಧದಲ್ಲಿ ಅಣ್ಣ ತಂಗಿ. ಆದರೆ, ಅಣ್ಣ ತಂಗಿಯ ಪ್ರೀತಿ ಲಿವಿಂಗ್ ರಿಲೇಶನ್ ಶಿಪ್ ತಿರುಗಿದ್ದು, ಇಬ್ಬರೂ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಆದರೆ ಇಂದು ರಾಮಲಕ್ಷ್ಮಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವ ಇದೆ.
ಇದನ್ನೂ ಓದಿ: ಪ್ರಿಯಕರನ ಕರ್ಮಕಾಂಡ ಕಂಡು ಶಾಕ್: ಪೊಲೀಸ್ ಠಾಣೆಯಲ್ಲಿ ತಾಳಿ ಕಿತ್ತೆಸೆದ ಯುವತಿ
ರಾಮಲಕ್ಷ್ಮಿ ಹಾಗೂ ಕೃಷ್ಣ ಕಳೆದ ಮೂರು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಹೊಂದಿದ್ದರು. ಇದರಿಂದ ಎರಡು ಕುಟುಂಬಗಳ ಬಂಧು ಬಳಗ, ಇಬ್ಬರಿಗೂ ಬೈಯ್ದು ಬುದ್ದಿವಾದ ಹೇಳಿದ್ದರು. ಕೊನೆಗೆ ರಾಮಕೃಷ್ಣಪುರದಲ್ಲಿ ಒಂದು ಕುಟುಂಬ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಒಂದು ಕುಟುಂಬವಾಗಿ ಪ್ರತ್ಯೇಕವಾಗಿ ನೆಲೆಸಿದ್ರು. ಮತ್ತೊಂದೆಡೆ ಕೃಷ್ಣನಿಗೆ ಬೇರೆ ಹುಡುಗಿಯ ಜೊತೆ ಮದುವೆಯನ್ನು ಮಾಡಿದ್ದರು. ಆದರೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿಯನ್ನು ಬಿಟ್ಟಿಲ್ಲ. ಆಕೆಯ ತಲೆ ಕೆಡಿಸಿ ಪ್ರತ್ಯೇಕ ಮನೆ ಮಾಡಿ ಕಳ್ಳ ಸಂಸಾರ ನಡೆಸುತ್ತಿದೆ ಎಂದು ತಿಳಿಸಿದರು. ಆದರೆ, ಇದೀಗ ರಾಮಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದರೆ, ಸಾವಿಗೆ ಅಣ್ಣ ವರಸೆಯ ಕೃಷ್ಣನೇ ಕಾರಣ ಎಂದು ಮೃತಳ ಅಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಒಟ್ಟಿನಲ್ಲಿ ಅಣ್ಣ ತಂಗಿಯ ಸಂಬಂಧ ಜನುಮದ ಅನುಬಂಧ ಎನ್ನುವ ಪವಿತ್ರತೆಗೆ ದಕ್ಕೆ ತಂದಿದ್ದು, ತಂಗಿ ಸಾವಿನ ಮನೆ ಸೇರಿದ್ರೆ, ಅಣ್ಣ ಭಯದಿಂದ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.