Headlines

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಹಂತವನ್ನು ತಲುಪಿದೆ. ಉಭಯ ತಂಡಗಳ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸರಣಿ ಸೋಲುವ ಆತಂಕವಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡದ ಸರಣಿ ಸೋಲಿನಿಂದ ಪಾರಾಗಲು ಇಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಬೇಕು. ಟೆಸ್ಟ್ ಸರಣಿ ಗೆಲುವಿನೊಂದಿಗೆ ಪ್ರವಾಸ ಆರಂಭಿಸಿರುವ ದಕ್ಷಿಣ ಆಫ್ರಿಕಾ ಈಗಲೇ ಗೆಲುವಿನೊಂದಿಗೆ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಇತ್ತ ಟೀಂ ಇಂಡಿಯಾ ಏಕದಿನ ಸರಣಿಯ ಜೊತೆಗೆ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ಸಜ್ಜಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಧಾರಕ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಮೊದಲು ಇಂಡಿಯಾ ಬ್ಯಾಟಿಂಗ್ ಮಾಡಲಿದೆ. ಇತ್ತ ಟಾಸ್ ಸೋತ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುವುದಾಗಿ ಹೇಳಿದರು. ಅಂದರೆ ಟಾಸ್ ಸೋತರೂ ಟೀಂ ಇಂಡಿಯಾಗೆ ಬೇಕಿದ್ದು, ಸಿಕ್ಕಿದೆ. ಇನ್ನು ಟೀಂ ಇಂಡಿಯಾದಲ್ಲಿ ಬರೋಬ್ಬರಿ 3 ಬದಲಾವಣೆಗಳನ್ನು ಮಾಡಲಾಗಿದ್ದರೆ, ಆಫ್ರಿಕಾ ತಂಡದಲ್ಲಿ 1 ಬದಲಾವಣೆಯಾಗಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ.



Source link

Leave a Reply

Your email address will not be published. Required fields are marked *