
<p>ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಗುವಾಹಟಿ ಟೆಸ್ಟ್ಗೂ ಮುನ್ನ ನಾಯಕ ಶುಭಮನ್ ಗಿಲ್ ಫಿಟ್ನೆಸ್ ಬಗ್ಗೆ ಅನುಮಾನ ಮೂಡಿದೆ. ಆಟಗಾರ ನಿತೀಶ್ ಕುಮಾರ್ ರೆಡ್ಡಿ ತಂಡಕ್ಕೆ ಮರಳುತ್ತಿದ್ದಾರೆ. ಸರಣಿ ಸಮಬಲಗೊಳಿಸಲು ಭಾರತಕ್ಕೆ ಎರಡನೇ ಟೆಸ್ಟ್ ನಿರ್ಣಾಯಕವಾಗಿದೆ.</p><img><p>ಭಾರತ-ದಕ್ಷಿಣ ಆಫ್ರಿಕಾ ನಡುವಿನ ಸರಣಿ ಗುವಾಹಟಿಗೆ ತಲುಪಿದೆ. ಮೊದಲ ಟೆಸ್ಟ್ ಸೋತ ಭಾರತಕ್ಕೆ ಸರಣಿ ಸಮಬಲಗೊಳಿಸಲು ಈ ಪಂದ್ಯ ನಿರ್ಣಾಯಕ. ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ 30 ರನ್ಗಳ ಜಯ ಸಾಧಿಸಿತ್ತು.</p><img><p>ಮೊದಲ ಟೆಸ್ಟ್ನಲ್ಲಿ ಕುತ್ತಿಗೆ ನೋವಿನಿಂದಾಗಿ ಗಿಲ್ ರಿಟೈರ್ಡ್ ಹರ್ಟ್ ಆಗಿದ್ದರು. ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ. ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೂ, ಸಂಪೂರ್ಣ ಫಿಟ್ ಆಗಿಲ್ಲ ಎಂಬ ಅನುಮಾನವಿದೆ.</p><img><p>ಸರಣಿ ನಿರ್ಣಾಯಕ ಹಂತದಲ್ಲಿದ್ದರೂ, ಆಯ್ಕೆ ಸಮಿತಿ ಹೊಸ ಬ್ಯಾಟರ್ನನ್ನು ಆಯ್ಕೆ ಮಾಡುವ ಯೋಚನೆಯಲ್ಲಿಲ್ಲ. ಈಗಾಗಲೇ ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್ ಅವರಂತಹ ಮೀಸಲು ಆಟಗಾರರು ತಂಡದಲ್ಲಿದ್ದಾರೆ.</p><img><p>ಇಂಡಿಯಾ ಎ ಏಕದಿನ ಸರಣಿಗೆ ಬಿಡುಗಡೆಯಾಗಿದ್ದ ನಿತೀಶ್ ರೆಡ್ಡಿಯನ್ನು ಮತ್ತೆ ಟೆಸ್ಟ್ ತಂಡಕ್ಕೆ ಕರೆಯಲಾಗಿದೆ. ಗಿಲ್ ಫಿಟ್ನೆಸ್ ಬಗ್ಗೆ ಅನಿಶ್ಚಿತತೆ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗಿಲ್ ಅಲಭ್ಯರಾದರೆ ನಿತೀಶ್ ಆಡಬಹುದು.</p><img><p>ಭಾರತ ಸದ್ಯ ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿದೆ. ಗುವಾಹಟಿಯಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯ ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿ ಉಳಿಯಲು ಸಾಧ್ಯವಾಗುತ್ತದೆ.</p>
Source link
Ind vs SA ಗುವಾಹಟಿ ಟೆಸ್ಟ್ಗೂ ಮುನ್ನ ಟೀಂ ಇಂಡಿಯಾ ಮಾಸ್ಟರ್ ಪ್ಲಾನ್; ತಂಡದಲ್ಲಿ ಮಹತ್ವದ ಬದಲಾವಣೆ!