
<p>ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬರುವ 2026ರ ಐಪಿಎಲ್ ಟೂರ್ನಿ ಆಯೋಜನೆಗೊಳ್ಳಲಿದೆಯೇ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಈ ಕುರಿತಾದ ಮಹತ್ವದ ಅಪ್ಡೇಟ್ಸ್ ಇಲ್ಲಿದೆ ನೋಡಿ.</p><p> </p><img><p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಸಲು ರಾಜ್ಯ ಸರ್ಕಾರ ಅನುಮತಿಸಿದರೂ ಆರ್ಸಿಬಿ ತಂಡವು ಇಲ್ಲಿ ಪಂದ್ಯಗಳನ್ನು ಆಡುವುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಬುಧವಾರ ಘೋಷಿಸುವ ನಿರೀಕ್ಷೆಯಿದೆ.</p><img><p>ಕೆಎಸ್ಸಿಎ ಹಾಗೂ ಆರ್ಸಿಬಿ ನಡುವೆ ನಿರಂತರ ಮಾತುಕತೆ ನಡೆಯುತ್ತಿದೆ. ಬೆಂಗಳೂರಿನಲ್ಲೇ ಪಂದ್ಯ ಆಡುವಂತೆ ಆರ್ಸಿಬಿಯನ್ನು ಕೆಎಸ್ಸಿಎ ಮನವೊಲಿಸುತ್ತಿದೆ. ಈ ನಡುವೆ ಕೆಎಸ್ಸಿಎ ಬುಧವಾರ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಆರ್ಸಿಬಿ ತಂಡ ಬೆಂಗಳೂರಿನಲ್ಲಿ ಪಂದ್ಯ ಆಡಲಿದೆಯೇ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.</p><img><p>ಈ ಮೊದಲು ಹಾಲಿ ಚಾಂಪಿಯನ್ ಆರ್ಸಿಬಿ ತಂಡವು ಪುಣೆ, ನವಿ ಮುಂಬೈ ಹಾಗೂ ರಾಯ್ಪುರದಲ್ಲಿ ಮುಂಬರುವ ಐಪಿಎಲ್ ಪಂದ್ಯಗಳನ್ನು ಆಡಲಿದೆ ಎಂದೆಲ್ಲಾ ವರದಿಯಾಗಿತ್ತು.</p><img><p>ಇದೆಲ್ಲದರ ನಡುವೆ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಂತರಾಷ್ಟ್ರೀಯ ಹಾಗೂ ಐಪಿಎಲ್ ಮ್ಯಾಚ್ ಆಯೋಜಿಸಲು ಷರತ್ತುಬದ್ದ ಅನುಮತಿ ನೀಡಿತ್ತು.</p><img><p>ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಸ್ವಂತ ಖರ್ಚಿನಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 300ರಿಂದ 350 ಎಐ ಆಧಾರಿತ ಕ್ಯಾಮರ ಅಳವಡಿಸಲು ಒಲವು ತೋರಿತ್ತು. ಇದು ಆರ್ಸಿಬಿ ಅಭಿಮಾನಿಗಳ ಆಸೆಗೆ ಬಲ ತುಂಬುವಂತೆ ಮಾಡಿತ್ತು.</p><img><p>ಕಳೆದ ವರ್ಷ ಜೂನ್ 04ರಂದು ನಡೆದ ಆರ್ಸಿಬಿ ಸಂಭ್ರಮಾರಣೆಯ ಸಂದರ್ಭದಲ್ಲಿ ಕಾಲ್ತುಳಿತದ ದುರಂತದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಮ್ಯಾಚ್ ನಡೆದಿಲ್ಲ. ಇದೀಗ 19ನೇ ಆವೃತ್ತಿಯ ಐಪಿಎಲ್ ಮೂಲಕವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಕಲರವ ಶುರುವಾಗುವ ನಿರೀಕ್ಷೆ ಗರಿಗೆದರುವಂತೆ ಮಾಡಿದೆ.</p>
Source link
ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ: ಇಂದು ಅಧಿಕೃತ ಘೋಷಣೆ? ಫ್ಯಾನ್ಸ್ಗೆ ಸಿಗುತ್ತಾ ಗುಡ್ ನ್ಯೂಸ್?