Headlines

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ


RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು, ಮಾ.25: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ. ಇದೊಂದು ಅಭಿಮಾನಿಗಳಿಗೆ ಹಬ್ಬವೇ ಸರಿ, ಈ ಬಾರಿ ಆರ್ಸಿಬಿ ಮೊದಲ ಪಂದ್ಯ ನಡೆಯಲಿರುವ ಕಾರಣ ಇನ್ನು ರೋಚಕವಾಗಿರಲಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಅಭಿಮಾನಿಗಳು ಇರುವ ಕಾರಣ ಹೆಚ್ಚು ಜನ ಸೇರಬಹುದು. ಹಾಗೂ ಜನ ದಟ್ಟಣೆಯೂ ಆಗಬಹುದು ಇದರ ಜೊತೆಗೆ ವಾಹನ ದಟ್ಟಣೆ ಕೂಡ ಆಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಸಂಚಾರಿ ಠಾಣೆ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿ ಹೆಚ್ಚಿನ ವ್ಯವಸ್ಥೆ ಮಾಡಿದೆ. ಸಂಚಾರಿ ವ್ಯವಸ್ಥೆಗಳನ್ನು ಕೂಡ ಪಾರ್ಕಿಂಗ್ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಯೋಜನೆ ಹಾಕಲಾಗಿದೆ. ಇದೀಗ ಮೆಟ್ರೋ ಕೂಡ ಈ ದಿನದಂದು ಹೆಚ್ಚಿನ ಸೇವೆಗಳನ್ನು ನೀಡಲು ಮುಂದಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿ ಟಿ-20 ಪಂದ್ಯದ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ. ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಸುರಕ್ಷಿತವಾಗಿ ಮನೆ ತಲುಪಲು ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯ ಸಮಯದ ಬದಲಾಗಿ ಅಂದು ರಾತ್ರಿ 11 ರಿಂದ ಮುಂಜಾನೆ 2 ಗಂಟೆಗಳವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ.

ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ:

ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12.30ಕ್ಕೆ.

ಚೆಲ್ಲಘಟ್ಟ: ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12.45ಕ್ಕೆ.

ಬೊಮ್ಮಸಂದ್ರ: ರಾತ್ರಿ 01.00ಕ್ಕೆ.

ಆರ್.ವಿ. ರಸ್ತೆ: ಮುಂಜಾನೆ 02.00ಕ್ಕೆ.

ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ) ನಿಂದ ನಾಲ್ಕೂ ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲುಗಳು ಹೊರಡಲಿವೆ. ಮೆಟ್ರೋ ನಿಲ್ದಾಣಗಳಲ್ಲಿ ವಾಹನ ನಿಲುಗಡೆಗೆ ಹೆಚ್ಚಿನ ಒತ್ತಡವಿರುವ ಕಾರಣ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!

ಪಂದ್ಯದ ದಿನ ರಸ್ತೆಗಳು ಬಂದ್!

ಆರ್‌ಸಿಬಿ ಮತ್ತು ಆರ್‌ಎಚ್ ನಡುವಿನ ಪಂದ್ಯ. ಈ ಬಾರಿ ಪಂದ್ಯಕ್ಕೆ ಭಾರೀ ಜನ ಸೇರುವ ಸಾಧ್ಯತೆಗಳಿವೆ. ಅದರಲ್ಲಿ ನೆಚ್ಚಿನ ಟೀಮ್ ಆರ್ ಸಿಬಿ ಬೆಂಗಳೂರಿನಲ್ಲಿ ಆಡುತ್ತಿದ್ದರೆ ಖಂಡಿತ ಜನ ಬರುವುದು ಖಂಡಿತ. ಅದಕ್ಕಾಗಿ ಜನರನ್ನು ಮತ್ತು ವಾಹನಗಳನ್ನು ನಿಭಾಯಿಸಲು ಹಲವು ಕ್ರಮಗಳನ್ನು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿಯ ಮಂಡಳಿಯು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ವಾಹನ ಸಂಚಾರ ಹಾಗೂ ಪಾರ್ಕಿಂಗ್, ಜನರ ಓಡಾಟ ಎಲ್ಲದಕ್ಕೂ ಹೊಸ ರೂಲ್ಸ್ ತರಲಾಗಿದೆ. ಪಂದ್ಯಗಳ ದಿನದಂದು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *