Headlines

ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್

ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್



ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ: ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್
<p>ನವದೆಹಲಿ: 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಸಿಸಿಐ ಅಂತಿಮ ಡೆಡ್‌ಲೈನ್ ನೀಡಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ</p><img><p>2026ರ ಐಪಿಎಲ್‌ನಲ್ಲಿ ತವರು ಮೈದಾನಗಳನ್ನು ಆಯ್ಕೆ ಮಾಡಲು ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳಿಗೆ ಬಿಸಿಸಿಐ ಜ.27ರ ಗಡುವು ನೀಡಿದೆ. ಇದರೊಂದಿಗೆ ಆರ್‌ಸಿಬಿಯು ಬೆಂಗಳೂರಿನಲ್ಲಿ ಆಡಲಿದೆಯೇ ಇಲ್ಲವೇ ಎಂಬುದು 3-4 ದಿನಗಳಲ್ಲೇ ಗೊತ್ತಾಗಬಹುದು.</p><img><p>ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ ಬೆಂಗಳೂರಿನಲ್ಲಿ ಆಡುವ ಬಗ್ಗೆ ಆರ್‌ಸಿಬಿ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.</p><img><p>ಈ ನಡುವೆ ಬಿಸಿಸಿಐ, ಆರ್‌ಸಿಬಿಗೆ ಕೆಲ ದಿನಗಳ ಗಡುವು ನೀಡಿದೆ. ಇದರ ಜೊತೆಗೆ, ಪಂದ್ಯಗಳನ್ನು ನಡೆಸಬೇಕಿದ್ದರೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಕರ್ನಾಟಕ ಸರ್ಕಾರದಿಂದ ಯಾವುದೇ ಷರತ್ತುಗಳಿಲ್ಲದ ರೀತಿ ಅನುಮತಿ ಪಡೆಯಬೇಕೆಂದೂ ಸೂಚಿಸಿದೆ.</p><img><p>ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ‘ಮೂರು ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವುದನ್ನು ಕಾಯುತ್ತಿದ್ದೇವೆ. ನಂತರ ಐಪಿಎಲ್‌ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ. ರಾಜಸ್ಥಾನ ತನ್ನ ಪಂದ್ಯಗಳನ್ನು ಪುಣೆಯಲ್ಲಿ ಆಯೋಜಿಸುವ ಸಾಧ್ಯತೆಯಿದೆ.</p><img><p>ಆದರೆ ರಾಜಸ್ಥಾನ ಸರ್ಕಾರ ಆರ್‌ಆರ್‌ನ ಐಪಿಎಲ್ ಪಂದ್ಯಗಳನ್ನು ಜೈಪುರದಲ್ಲಿ ನಡೆಸಲು ಉತ್ಸುಕವಾಗಿದೆ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ರಾಜಸ್ಥಾನ ಮತ್ತು ಆರ್‌ಸಿಬಿ ಎರಡೂ ತಂಡಗಳಿಗೆ ಜ.27ರ ವರೆಗೆ ಸಮಯ ನೀಡಿದ್ದೇವೆ’ ಎಂದು ತಿಳಿಸಿದ್ದಾಗಿ ವರದಿಯಾಗಿದೆ.</p><img><p>ಈಗಾಗಲೇ ಕರ್ನಾಟಕ ಸರ್ಕಾರವು ಐಪಿಎಲ್ ಪಂದ್ಯಗಳನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರ ಜತೆಗೆ ಕೆಎಸ್‌ಸಿಎ ಕೂಡಾ ಐಪಿಎಲ್‌ ಆಯೋಜನೆಗೆ ಉತ್ಸುಕವಾಗಿದೆ. ಇದೀಗ ಆರ್‌ಸಿಬಿ ಫ್ರಾಂಚೈಸಿ ಅಂತಿಮ ತೀರ್ಮಾನ ಮಾಡಬೇಕಿದೆ.</p>



Source link

Leave a Reply

Your email address will not be published. Required fields are marked *