Headlines

ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ

ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ


ಕಲಬುರಗಿ, ನವೆಂಬರ್ 21: ವಿಕಲಚೇತನ ಮಗಳ (ಮಗಳು) ಕೊಲೆ (ಕೊಲ್ಲಲು) ಆತ್ಮಹತ್ಯೆ ಮಾಡಿಕೊಂಡ ತಂದೆಯನ್ನು ಬಂಧಿಸಿರುವಂತಹ ಘಟನೆ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೇರಾವ್ ನೀಲೂರ ಕೊಲೆ ಮಾಡಿದ ತಂದೆ. ಸಬ್ ಅರ್ಬನ್ ಪೊಲೀಸರು ತನಿಖೆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಡೆದದ್ದೇನು?

ಜಮೀನು ವ್ಯಾಜ್ಯದ ವಿಚಾರದಲ್ಲಿ ಪಕ್ಕದ ಜಮೀನಿನವರ ಕಾಟ ಹಿನ್ನೆಲೆ ಅವರನ್ನು ಜೈಲಿಗೆ ಕಳುಹಿಸಬೇಕು ಅಂತ ತಂದೆ ಗುಂಡೇರಾವ್ ನೀಲೂರ ಸ್ವಂತ ಮಗಳನ್ನೇ ನೇಣು ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಪಕ್ಕದ ಜಮೀನಿನವರ ಹೆಸರು ಡೆತ್ ನೋಟಿನಲ್ಲಿ ಬರೆದು ಮಗಳ ಕೈಯಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಮುಂದಾಗಿದ್ದಾರೆ. ಆದರೆ ಅನುಮಾನಗೊಂಡು ವಿಚಾರಣೆ ನಡೆಸಿದ ಪೊಲೀಸರು ಈ ವೇಳೆ ಆತ್ಮಹತ್ಯೆಯಲ್ಲ ಕೊಲೆ ಅನ್ನೋದು ಬೆಳಕಿಗೆ ಬಂದಿದೆ.

ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದ ಕ್ರಾಸ್ ಬಳಿ ನಡೆದಿದೆ. ಕೋಟಗ್ಯಾಳ್ ಗ್ರಾಮದ ನಿವಾಸಿ ಲಹುಕುಮಾರ ಬಿರಾದಾರ (35) ಮೃತ ಬೈಕ್ ಸವಾರ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್: ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್?

ಎರಡು ಬೈಕ್‌ಗಳಲ್ಲಿ ಮೂವರು ಸ್ನೇಹಿತರು ಮಾತನಾಡುತ್ತ ತೆರಳಲು. ಈ ವೇಳೆ ಏಳುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿನ್ನೆ ರಾತ್ರಿ 7:30 ರ ಸುಮಾರಿಗೆ ಸಂಭವಿಸಿದ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಲಿವಿನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ ಹತ್ಯೆ: ಕಾರಣವೇನು?

ಇನ್ನು ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಅರ್ಜುನ್ ಹಾಗೂ ಇನ್ನೊಂದು ಬೈಕ್ ಸವಾರ ಬಾಲಾಜಿ ಗಂಭೀರ ಸಮಸ್ಯೆಯಲ್ಲಿದ್ದಾರೆ. ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:20 pm, ಶುಕ್ರ, 21 ನವೆಂಬರ್ 25



Source link

Leave a Reply

Your email address will not be published. Required fields are marked *