MES Black Day rally in Belagavi ಕನ್ನಡ ರಾಜ್ಯೋತ್ಸವದ ದಿನದಂದು ಬೆಳಗಾವಿ ಗಡಿಗೆ ಪ್ರವೇಶಿಸಲು ಯತ್ನಿಸಿದ ಶಿವಸೇನೆಯ ಪುಂಡರನ್ನು ಕರ್ನಾಟಕ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ. ನಾಡದ್ರೋಹಿ ಎಂಇಎಸ್ ಸಂಘಟನೆಯು ಬೆಳಗಾವಿಯಲ್ಲಿ ಕರಾಳ ದಿನದ ಮೆರವಣಿಗೆಯನ್ನು ನಡೆಸಿದೆ.
14

Image Credit : Asianet News
ಗಡಿಯಲ್ಲಿ ಪುಂಡಾಡಿಕೆ
ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿರುವಾಗ ಗಡಿಯಲ್ಲಿ ಪುಂಡಾಡಿಕೆ ಮಾಡಲು ಶಿವಸೇನೆಯ ಪುಂಡರು ಆಗಮಿಸಿದ್ದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಂಗನೊಳ್ಳಿ ಗಡಿಯಲ್ಲಿ ರಾಜ್ಯಕ್ಕೆ ಪ್ರವೇಶಿಸಲು ಉದ್ದವ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಅಧ್ಯಕ್ಷ ಸಂಜಯ್ ಪವಾರ್ ಹಾಗೂ ವಿಜಯ ದೇವನೆ ಆಗಮಿಸಿದ್ದರು.
24
Image Credit : Asianet News
ಶಿವಸೇನೆ ಪುಂಡರು
ಶಿವಸೇನೆ ಪುಂಡರನ್ನು ರಾಜ್ಯದ ಪೊಲೀಸರು ಗಡಿಯಲ್ಲಿಯೇ ತಡೆದಿದ್ದಾರೆ. ಸುಮಾರು 50 ಪುಂಡರ ಗುಂಪಿನೊಂದಿಗೆ ಸಂಜಯ್ ಪವಾರ್ ಹಾಗೂ ವಿಜಯ ದೇವನೆ ಬಂದಿದ್ದರು. ಗಡಿಯಲ್ಲಿ ಪುಂಡಾಟಿಕೆಗೆ ಕರ್ನಾಟಕ ಪೊಲೀಸರು ಬ್ರೇಕ್ ಹಾಕಿದ ಹಿನ್ನೆಲೆ ಬಂದ ದಾರಿಗೆ ಸುಂಕ ಇಲ್ಲದಂತೆ ವಾಪಸ್ ಆಗಿದ್ದಾರೆ. ಮಹಾರಾಷ್ಟ್ರ ಪೊಲೀಸರು ಶಿವಸೇನೆ ಪುಂಡರನ್ನು ಕರೆದುಕೊಂಡು ಹೋಗಿದ್ದಾರೆ.
34
Image Credit : Asianet News
ನಾಡದ್ರೋಹಿ ಎಂಇಎಸ್
44
Image Credit : Asianet News