Headlines

ಎಲ್ಲಾ ಸೀರಿಯಲ್​ ಜ್ಯೋತಿಷಿಗಳೇಕೇ ಮಹಾ ವಂಚಕರು? ಕರ್ಣ- ನಿಧಿ ಮದ್ವೆ ಮುಹೂರ್ತಕ್ಕೆ ಜಾಲತಾಣದಲ್ಲಿ ಭಾ ಆಕ್ರೋಶ! | Karna Serial Astrologer About Karna And Nidhis Marriage Suc

ಎಲ್ಲಾ ಸೀರಿಯಲ್​ ಜ್ಯೋತಿಷಿಗಳೇಕೇ ಮಹಾ ವಂಚಕರು? ಕರ್ಣ- ನಿಧಿ ಮದ್ವೆ ಮುಹೂರ್ತಕ್ಕೆ ಜಾಲತಾಣದಲ್ಲಿ ಭಾ ಆಕ್ರೋಶ! | Karna Serial Astrologer About Karna And Nidhis Marriage Suc


18

ವಂಚಕರಾಗಿ ಜ್ಯೋತಿಷಿಗಳು!

Image Credit : Instagram

ವಂಚಕರಾಗಿ ಜ್ಯೋತಿಷಿಗಳು!

ಸಾಮಾನ್ಯವಾಗಿ ನಿಜ ಜೀವನದಲ್ಲಿಯೂ ಶುಭ ಕಾರ್ಯಗಳನ್ನು ಮಾಡುವಾಗ ಜ್ಯೋತಿಷಿಗಳ ಮೊರೆ ಹೋಗುವುದು ಸಾಮಾನ್ಯ. ಅದರಲ್ಲಿಯೂ ಮದುವೆಯಂಥ ಕಾರ್ಯಗಳಲ್ಲಿ ತಿಥಿ, ಗಳಿಗೆ ಎಲ್ಲವನ್ನೂ ನೋಡಿ ಮದುವೆ ಮುಹೂರ್ತ ಫಿಕ್ಸ್​ ಮಾಡುವುದೂ ಇವರೇ. ಆದರೆ ಇದೀಗ ಬಹುತೇಕ ಎಲ್ಲಾ ಸೀರಿಯಲ್​ಗಳಲ್ಲಿಯೂ ಜ್ಯೋತಿಷಿಗಳನ್ನು ಮಹಾ ವಂಚಕರಂತೆ ತೋರಿಸಲಾಗುತ್ತಿದೆ!

28

ಕರ್ಣದಲ್ಲೂ ಇದೇ ಸ್ಟೋರಿ

Image Credit : zee5

ಕರ್ಣದಲ್ಲೂ ಇದೇ ಸ್ಟೋರಿ

ಇದೀಗ ಕರ್ಣ ಸೀರಿಯಲ್​ (Karna Serial)ನಲ್ಲಿಯೂ ಇದೇ ಸ್ಟೋರಿ. ಇದಾಗಲೇ ಬಹುತೇಕ ಸೀರಿಯಲ್​ಗಳಲ್ಲಿ ವಿಲನ್​ಗಳು ಜ್ಯೋತಿಷಿಗಳಿಗೆ ಲಂಚ ನೀಡಿ ನಾಯಕ-ನಾಯಕಿಯನ್ನು ಬೇರೆ ಬೇರೆ ಮಾಡುವುದು ನಡೆದೇ ಇದೆ. ಅದರಲ್ಲಿಯೂ ಹೆಚ್ಚಾಗಿ ಅವರಿಬ್ಬರೂ ದೈಹಿಕ ಸಂಬಂಧ ಮಾಡಬಾರದು ಎಂದು ಸುಳ್ಳು ಜ್ಯೋತಿಷ ಹೇಳಿಸುವುದು ಸೀರಿಯಲ್​ಗಳಲ್ಲಿ ಸರ್ವೇ ಸಾಮಾನ್ಯವಾಗಿದೆ.

38

ಕರ್ಣ- ನಿತ್ಯಾ ಮದುವೆ!

Image Credit : Instagram

ಕರ್ಣ- ನಿತ್ಯಾ ಮದುವೆ!

ಇದಕ್ಕಿಂತ ತುಸು ಭಿನ್ನ ಎನ್ನುವಂತೆ ಕರ್ಣ ಸೀರಿಯಲ್​ನಲ್ಲಿ ಕರ್ಣ ಮತ್ತು ನಿತ್ಯಾಳ ಮದುವೆ ಮಾಡಿಸಲು ವಿಲನ್​ ಮುಂದಾಗಿದ್ದಾನೆ. ಕರ್ಣನ ತಂದೆ ರಮೇಶ್ ಮಾಡಿರುವ ಕುತಂತ್ರದಿಂದ ಇದೀಗ ಕರ್ಣ ಮತ್ತು ನಿತ್ಯಾ ನಿಜವಾಗಿಯೂ ಮದುವೆಯಾಗಬೇಕಾಗಿದೆ.

48

ನಿತ್ಯಾ ಒಡಲ ಗುಟ್ಟು

Image Credit : zee5, Namratha gowda

ನಿತ್ಯಾ ಒಡಲ ಗುಟ್ಟು

ಇದಾಗಲೇ ಇವರಿಬ್ಬರ ಮದುವೆಯಾಗಿರುವುದಾಗಿ ಎಲ್ಲರೂ ನಂಬಿದ್ದಾರೆ. ಆದರೆ ಅಸಲಿಗೆ ನಿಧಿ ಗರ್ಭಿಣಿಯಾಗಿರುವುದರಿಂದ ಆಕೆಯನ್ನು ರಕ್ಷಿಸಲು ಕರ್ಣ ಮದುವೆಯಾದಂತೆ ನಾಟಕ ಮಾಡಿದ್ದಾನೆ. ಇದರಲ್ಲಿ ನಿಧಿನೇ ತನ್ನ ಕೊರಳಿಗೆ ತಾಳಿ ಕಟ್ಟಿಕೊಂಡಿದ್ದಾಳೆ.

58

ರಮೇಶನ ಪ್ಲ್ಯಾನ್​

Image Credit : Instagram

ರಮೇಶನ ಪ್ಲ್ಯಾನ್​

ಈ ಸತ್ಯ ರಮೇಶ್​ಗೆ ಗೊತ್ತಿದೆ. ನಿಧಿ ಮತ್ತು ಕರ್ಣ ಲವ್​ ಮಾಡ್ತಿರೋದೂ ಗೊತ್ತಿದೆ. ಆದ್ದರಿಂದ ಅವರಿಗೆ ಹಿಂಸೆ ಕೊಡುವುದಕ್ಕಾಗಿಯೇ ಈ ಪ್ಲ್ಯಾನ್​ ಮಾಡಿದ್ದಾನೆ.

68

ಅಶುಭ ಎಂದ ಜ್ಯೋತಿಷಿ

Image Credit : Instagram

ಅಶುಭ ಎಂದ ಜ್ಯೋತಿಷಿ

ನಿತ್ಯಾಳ ಕುತ್ತಿಗೆಯಲ್ಲಿ ಇದ್ದ ತಾಳಿಯನ್ನು ಆಕೆ ಮಲಗಿದಾಗ ಗಾಯಬ್​ ಮಾಡಿ, ಅದು ಬಿದ್ದುಹೋಗಿರುವುದಾಗಿ ನಟಿಸಲಾಗಿದೆ. ಈ ಸಂದರ್ಭದಲ್ಲಿ ಜ್ಯೋತಿಷಿಗೆ ದುಡ್ಡು ಕೊಟ್ಟು ಕರೆಸಿದ್ದಾನೆ ರಮೇಶ. ಅವನು ತನಗೆ ಎಲ್ಲವೂ ಗೊತ್ತಿರುವ ಹಾಗೆ ನಾಟಕ ಮಾಡಿ, ಮಂಗಳಸೂತ್ರ ಕಿತ್ತು ಹೋಗಿರುವುದು ಅಶುಭ ಎಂದಿದ್ದಾನೆ.

78

ಎರಡೇ ದಿನಗಳಲ್ಲಿ ಮದುವೆ

Image Credit : Instagram

ಎರಡೇ ದಿನಗಳಲ್ಲಿ ಮದುವೆ

ಎರಡು ದಿನಗಳಲ್ಲಿ ಶುಭ ಮುಹೂರ್ತ ಇದ್ದು, ಮತ್ತೊಮ್ಮೆ ಕರ್ಣ ನಿತ್ಯಾಳಿಗೆ ತಾಳಿ ಕಟ್ಟಿದರೆ ಎಲ್ಲವೂ ಸರಿಯಾಗುತ್ತೆ ಎಂದಿದ್ದಾನೆ. ಅಲ್ಲಿಗೆ ಕರ್ಣ ಅಜ್ಜಿಗೆ ಖುಷಿಯಾಗಿದೆ. ಇದೇ ವೇಳೆ ರಮೇಶ್​ ಈ ಜ್ಯೋತಿಷಿಯತ್ತ ಓರೆನೋಟ ಬೀರಿ, ಧನ್ಯವಾದ ಸಲ್ಲಿಸಿದ್ದಾನೆ.

88

ವಿಲನ್ ಯಾಕೆ?

Image Credit : Instagram

ವಿಲನ್ ಯಾಕೆ?

ಅಲ್ಲಿಗೆ ರಮೇಶನೇ ದುಡ್ಡು ಕೊಟ್ಟು ಜ್ಯೋತಿಷಿ ಬಳಿ ಸುಳ್ಳು ಹೇಳಿಸಿರುವುದು ತಿಳಿಯುತ್ತದೆ. ಪದೇ ಪದೇ ಜ್ಯೋತಿಷಿಗಳನ್ನು ಈ ರೀತಿಯಾಗಿ ಸೀರಿಯಲ್​ಗಳಲ್ಲಿ ತೋರಿಸುವುದಕ್ಕೆ ಭಾರಿ ಆಕ್ರೋಶ, ಅಸಮಾಧಾನ ಹೊರ ಹಾಕಲಾಗುತ್ತಿದೆ. ಇದೇ ಮಾರ್ಗ ಬೇಕಾ? ಬೇರೆಯ ರೀತಿಯಲ್ಲಿ ಇದೇ ದೃಶ್ಯಗಳನ್ನು ತೋರಿಸಬಹುದಲ್ವಾ, ಎಲ್ಲಾ ಸೀರಿಯಲ್​ಗಳಲ್ಲಿಯೂ ಜ್ಯೋತಿಷಿಗಳನ್ನು ವಿಲನ್​ಗಳಂತೆ ಬಿಂಬಿಸುವುದು ಏಕೆ ಎನ್ನುವ ಪ್ರಶ್ನೆ ಮೂಡಿಬರುತ್ತಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.



Source link

Leave a Reply

Your email address will not be published. Required fields are marked *