
ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ವಿದ್ಯಾರ್ಥಿಗಳು ಹಾಗೂ ಆಸಕ್ತಿಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc ಪರೀಕ್ಷೆಯ ಫಲಿತಾಂಶ) ನಾಳೆ(ಏ.7) ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧುಬಂಗಾರಪ್ಪ (ಮಧು ಬಂಗಾರಪ್ಪ) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ತಿಳಿಸಿದ್ದಾರೆ. ಆದರೆ, ನಾಳೆ(ಏಪ್ರಿಲ್ 7) ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನಿರಾಸೆಯಾಗಿದೆ.
ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. ಹೀಗಾಗಿ ಪ್ರತಿವರ್ಷಕ್ಕಿಂತ ಈ ಬಾರಿ ಬೇಗ ರಿಸಲ್ಟ್ ಕೊಡುತ್ತಾರೆಂದು ವಿದ್ಯಾರ್ಥಿಗಳು ಹಾಗೂ ಪೋಷಕರ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಎಕ್ಸಾಂ ಬೋರ್ಡ್ ಅಧಿಕಾರಿಗಳು ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ. ಇನ್ನೂ ಯಾವಾಗ ಫಲಿತಾಂಶ ಪ್ರಕಟಿಸಬೇಕು ಎಂಬುದನ್ನು ಕುರಿತು ದಿನಾಂಕ ನಿಗದಿಪಡಿಸಿಲ್ಲ.
ಇದನ್ನೂ ಓದಿ: ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2026 ದಿನಾಂಕ: ದ್ವಿತೀಯ ಪಿಯುಸಿ ಫಲಿತಾಂಶ ಆನ್ಲೈನ್ನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ
ಮಾರ್ಚ್ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಆದರೆ, ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಫಲಿತಾಂಶದ ದಿನಾಂಕವನ್ನು ಮುಂದೂಡಲಾಗಿದೆ, ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ. ಇನ್ನು ಫಲಿತಾಂಶ ಯಾವಾಗ? ಏನು ಅಂತ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಇದರಿಂದ ಗೊಂದಲ ಸೃಷ್ಟಿಯಾಗಿದೆ.
ಹೆಚ್ಚಿನ ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ