
ಬೆಂಗಳೂರು, ಏಪ್ರಿಲ್ 09: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ಹೊಸ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಡಿ ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದಂತ ಚಿಕಿತ್ಸೆಯನ್ನೂ ಈ ಯೋಜನೆಯಡಿಯಲ್ಲಿ ಪಡೆದವರು ಈ ಯೋಜನೆಗಳನ್ನು ಸ್ವೀಕರಿಸಬಹುದಾಗಿದ್ದರೆ, ಅದರ ಬಗ್ಗೆ ಎಕ್ಸ್ ಪೋಸ್ಟ್ ಮಾಡುವ ಮೂಲಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸಚಿವರು ಹೇಳಿದ್ದೇನು?
ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸುವುದು, ಒಂದು ಸಮಯದಲ್ಲಿ ಒಂದು ಅಂತರ.
ಕರ್ನಾಟಕ ಸರ್ಕಾರವು AB PMJAY–CM ಅವರ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ರೂಟ್ ಕೆನಾಲ್ ಚಿಕಿತ್ಸೆಯನ್ನು ಸೇರಿಸಲು ಅನುಮೋದಿಸಿದೆ, PHH ಮತ್ತು NPHH ಫಲಾನುಭವಿಗಳಿಗೆ ಅಗತ್ಯ ದಂತ ಆರೈಕೆಗೆ ಪ್ರವೇಶವನ್ನು ವಿಸ್ತರಿಸಿದೆ.
ಈ ಕ್ರಮವು ಎರಡನ್ನೂ ತರುತ್ತದೆ… pic.twitter.com/ut2xuJCBWu
— ದಿನೇಶ್ ಗುಂಡೂರಾವ್/ದಿನೇಶ್ ಗುಂಡೂರಾವ್ (@dineshgrao) ಏಪ್ರಿಲ್ 9, 2026
ಸಾರ್ವಜನಿಕ ಆರೋಗ್ಯ ಸೇವೆಯನ್ನು ಹಂತ ಹಂತವಾಗಿ ಬಲಪಡಿಸುವ ದಿಸೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಎಂದಿರುವ ಸಚಿವರು, ಈ ಯೋಜನೆ ಮುಂಭಾಗ (ಮುಂಭಾಗ) ಮತ್ತು ಹಿಂಭಾಗ (ಪೋಸ್ಟರ್) ಹಲ್ಲುಗಳ ರೂಟ್ ಕ್ಯಾನಲ್ ಚಿಕಿತ್ಸೆಯನ್ನು ಒಳಗೊಂಡಿದ್ದು, ರಾಜ್ಯದಾದ್ಯಂತ ಸಮಯೋಚಿತ, ಕೈಗೆಟುಕುವ ಮತ್ತು ಗುಣಮಟ್ಟದ ದಂತ ಆರೋಗ್ಯ ಸೇವೆಗಳನ್ನು ಇದು ಒದಗಿಸುತ್ತದೆ. CGHS ಟೈಯರ್-3 ಪ್ರಸ್ತುತದ ಪ್ಯಾಕ್ ದರಗಳು ಮತ್ತು ಸ್ಪಷ್ಟ ಕ್ಲಿನಿಕಲ್ ವರ್ಗೀಕರಣದೊಂದಿಗೆ, ಚಿಕಿತ್ಸೆಯಲ್ಲಿ ಏಕತೆಯನ್ನು ತರಲು ಇದು ಸಹಾಯ ಮಾಡಿದೆ ಎಂದು ಅವರು ಸೂಚಿಸಿದ್ದಾರೆ.
ಇದನ್ನೂ ಓದಿ: ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ಜಾರಿಗೆ ತರಲಾಗುತ್ತಿರುವ ಈ ಪ್ಯಾಕೇಜ್ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ರೀತಿಯ ವೆಚ್ಚಗಳನ್ನು ಒಳಗೊಂಡಿರುತ್ತದೆ, ಹೆಚ್ಚುವರಿ ಶುಲ್ಕಗಳನ್ನು ಭರಿಸಬೇಕಾಗುವುದಿಲ್ಲ ಎಂದು ಸೂಚಿಸಲಾಗುತ್ತದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.