
ಬೆಂಗಳೂರು, (ಮಾರ್ಚ್ 06): ಕೇಂದ್ರ ಸರ್ಕಾರದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನವನ್ನು ನೀಡಲಾಯಿತು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಾತ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು.