Headlines

ಸಂಪುಟ ಸರ್ಜರಿ ಸಸ್ಪೆನ್ಸ್​: ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾಲು ಸಾಲು ನಾಯಕರು

ಸಂಪುಟ ಸರ್ಜರಿ ಸಸ್ಪೆನ್ಸ್​: ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾಲು ಸಾಲು ನಾಯಕರು


ಬೆಂಗಳೂರು, ನವೆಂಬರ್ 17: ಸಚಿವ ಸಂಪುಟ ಸರ್ಜರಿ ವಿಚಾರ ಮುನ್ನೆಲೆಗೆ ಬಂದ ಹಿನ್ನಲೆ ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಹೊರಡುವ ಮುನ್ನ ಅವರ ಮನೆಗೆ ಸಾಲು ಸಾಲು ಕಾಂಗ್ರೆಸ್ ನಾಯಕರು ಭೇಟಿನೀಡಿದ್ದಾರೆ. ಆ ಮೇಲಾದರೂ ಮಂತ್ರಿ ಸ್ಥಾನದ ಆಕಾಂಕ್ಷಿಗಳು ಅಗತ್ಯ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ, ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಭೇಟಿ ಮಾಡಲಿದ್ದಾರೆ.

ಶಾಸಕರಾದ ಪ್ರದೀಪ್ ಈಶ್ವರ್, ಅಶೋಕ್ ಪಟ್ಟಣ್, ಕಾಶಪ್ಪನವರ್, ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರಾದ ಕೆ.ಎನ್. ರಾಜಣ್ಣ ಸೇರಿ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಮೇಲಕ್ಕೆ ಮತ್ತು ಸಿಎಂ ಕೆ.ಎನ್.ರಾಜಣ್ಣ ನಡುವೆ ಸುಮಾರು 20 ನಿಮಿಷ ಪ್ರತ್ಯೇಕ ಮಾತುಕತೆ ನಡೆದಿದೆ. ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಮುನ್ನ ಕೆ.ಎನ್.ರಾಜಣ್ಣ ಚರ್ಚೆ ನಡೆಸಿ ಭಾರೀ ಕುತೂಹಲ ಮೂಡಿಸಿದೆ. ಮಂತ್ರಿ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಜೊತೆ ರಾಜಣ್ಣ ಚರ್ಚೆ. ಮಂತ್ರಿ ಸ್ಥಾನಕ್ಕಿಂತ ತಮ್ಮ ಕುರಿತು ಉಂಟಾಗಿರುವ ತಪ್ಪು ಅಭಿಪ್ರಾಯವನ್ನು ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿ ಎಂದು ಈ ವೇಳೆ ರಾಜಣ್ಣ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಕ್ರಾಂತಿ ಕಿಚ್ಚಿನ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್

ತಮ್ಮ ಭೇಟಿಗೆ ಬಂದ ಅಣ್ಣನ ಬಳಿ ಬಾರಯ್ಯ ಡೆಲ್ಲಿಗೆ ಹೋಗಿ ಬರೋಣ ಎಂದು ಸಿಎಂ ಆಹ್ವಾನ ನೀಡಿದ ಪ್ರಸಂಗವೂ ನಡೆದಿದ್ದು, ಇಲ್ಲ ಸರ್.. ಹೈಕಮಾಂಡ್ ಎಲ್ಲಾ ಬೇಡ ನೀವು ಬನ್ನಿ ಎಂದು ರಾಜಣ್ಣ ಅವರು. ರಾಜಣ್ಣ ಮಾತುಕತೆ ವೇಳೆ ಸಿಎಂ ಆಗಮಿಸಿದ ಸಚಿವ ಹೆಚ್.ಸಿ.ಮಹದೇವಪ್ಪ, ಏನು ಇಬ್ಬರೇ ಸಪರೇಟ್ ಸಭೆ ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿದ್ದಾರೆ. ನನ್ನ, ರಾಜಣ್ಣ ನಡುವೆ ಒಳಗೊಂದು ಹೊರಗೊಂದು ಇಲ್ಲ ಎಂದು ಸಿಎಂ ನಗುತ್ತಲೇ ಉತ್ತರ ನೀಡಿದ್ದು, ದೆಹಲಿಗೆ ಹೋಗಿ ಮಾತನಾಡಿ ಬರ್ತೀನಿ.

ಸಿಎಂ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವಿಜಯಾನಂದ ಕಾಶಪ್ಪನವರ್, ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ.ಅದಕ್ಕಾಗಿಯೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕಾಲ ಬಂದಾಗ ಮಾಡೋಣವೆಂದು ಸಿಎಂ ಹೇಳಿದ್ದು, ಕಾಂಗ್ರೆಸ್‌ನಲ್ಲಿ ಇಡೀ ನನ್ನ ಕುಟುಂಬ ಭದ್ರ ಬುನಾದಿ, ಸಲ್ಲಿಸಿದ ಸೇವೆಯನ್ನು ವರಿಗಣಿಸಿ ಎಂದು ಕೇಳಿದ್ದೇವೆ. ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಕಾಶಪ್ಪನವರ್ ಹೇಳಿದ್ದಾರೆ. ಈ ಬಗ್ಗೆ ಸಿಎಂ, ಡಿಸಿಎಂ, ಕೆಸಿ ವೇಣುಗೋಪಾಲ್, ಸುರ್ಜೇವಾಲ ಸೇರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮನವಿ ಮಾಡಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಮ್ಮ ದೇವರಾಗಿದ್ದರೆ, ದೇವರು ಇಲ್ಲೇ ಇರಬೇಕಾದ್ರೆ ಬೇರೆ ಎಲ್ಲಿಗೆ ಹೋಗಲಿ ಎಂದವರು.

ವರದಿ: ಈರಣ್ಣ ಬಸವ, Tv9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *