
ಬೆಂಗಳೂರು, ನವೆಂಬರ್ 16: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಪುನಾರಚನೆ ಅಥವಾ ವಿಸ್ತರಣೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಐಸಿಸಿ ಉನ್ನತ ಮೂಲಗಳು TV9 ಕನ್ನಡಕ್ಕೆ ತಿಳಿಸಿವೆ. ಬೆಳಗಾವಿ ಅಧಿವೇಶನ ಮುಗಿದ ನಂತರ ಮತ್ತು ಸಂಕ್ರಾಂತಿ ಹಬ್ಬದ ಬಳಿಕವಷ್ಟೇ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಬಿಹಾರ ಚುನಾವಣೆ ಸೋಲಿನ ಪರಾಮರ್ಶೆಯಲ್ಲಿ ನಿರತವಾಗಿರುವ ಕಾರಣ ಸದ್ಯಕ್ಕೆ ಕರ್ನಾಟಕದಲ್ಲಿ ಯಾವುದೇ ಬದಲಾವಣೆಗಳ ಬಗ್ಗೆ ಮಾತುಕತೆ ನಡೆಸಲಾಗಿದೆ. ರಾಜ್ಯ ನಾಯಕರಿಗೆ ಹೈಕಮಾಂಡ್ನಿಂದ ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.