
<p>ಇತ್ತೀಚೆಗೆ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಬೆಂಗಳೂರಿನಿಂದ ಹೊರವಲಯಕ್ಕೆ ಸ್ಥಳಾಂತರಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ. ಈ ಸ್ಟೇಡಿಯಂ ವಿಶೇಷತೆ ಏನು?</p><img><p>ಬೆಂಗಳೂರಿನ ಹೊರವಲಯದ ಬೊಮ್ಮಸಂದ್ರದ ಬಳಿ ಸೂರ್ಯ ನಗರದಲ್ಲಿ 100 ಎಕರೆ ಜಾಗದಲ್ಲಿ 1650 ಕೋಟಿ ರುಪಾಯಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ.</p><img><p>ಈ ಕ್ರೀಡಾಂಗಣವನ್ನು ಕರ್ನಾಟಕ ಗೃಹ ಮಂಡಳಿಯಿಂದ ನಿರ್ಮಿಸಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವುದಿಲ್ಲ. ಎಲ್ಲಾ ಖರ್ಚನ್ನು ಗೃಹ ಮಂಡಳಿಯೇ ನೋಡಿಕೊಳ್ಳಲಿದೆ. ಇದರ ಜತೆಗೆ ನಿರ್ವಹಣೆಯನ್ನೂ ಗೃಹ ಮಂಡಳಿಯೇ ಮಾಡಲಿದೆ.</p><img><p>ಈ ಹೊಸ ಸ್ಟೇಡಿಯಂ 80,000 ಆಸನ ಸಾಮರ್ಥ್ಯವನ್ನು ಹೊಂದಿದ್ದು, ಭಾರತದ ಎರಡನೇ ಅತಿದೊಡ್ಡ, ಒಟ್ಟಾರೆ ಮೂರನೇ ದೊಡ್ಡ ಆಸನ ಸಾಮರ್ಥ್ಯ ಹೊಂದಿದ ಸ್ಟೇಡಿಯಂ ಇದಾಗಲಿದೆ.</p><img><p>ಸದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ(1,32,000), ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂ(1,00,000) ಬಳಿಕ ಬೆಂಗಳೂರಿನ ಸ್ಟೇಡಿಯಂ(80,000) ಮೂರನೇ ಸ್ಥಾನ ಪಡೆಯಲಿದೆ.</p><img><p>100 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ನೂತನ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ 8 ಹೊರಾಂಗಣ ಸ್ಟೇಡಿಯಂ ಹಾಗೂ 8 ಒಳಾಂಗಣ ಕ್ರೀಡೆಗಳ ಸ್ಟೇಡಿಯಂ ಇರಲಿದೆ.</p><img><p>ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಅತಿಥಿಗೃಹ, ಜಿಮ್, ಈಜುಕೊಳ, ರೆಸ್ಟೋರೆಂಟ್ ಹಾಗೂ ಇಂಟರ್ನ್ಯಾಷನಲ್ ಸೆಮಿನಾರ್ ಹಾಲ್ಗಳನ್ನು ಒಳಗೊಂಡಿರಲಿದೆ.</p><img><p>ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಈ ಹೊಸ ಕ್ರಿಕೆಟ್ ಸ್ಟೇಡಿಯಂ, ಸದ್ಯ ಚಿನ್ನಸ್ವಾಮಿ ಸ್ಟೇಡಿಯಂನಿಂದ 28 ಕಿಲೋಮೀಟರ್ ದೂರದಲ್ಲಿದೆ.</p>
Source link
ಬೆಂಗಳೂರಲ್ಲಿ ವಿಶ್ವದ 3ನೇ ಅತಿದೊಡ್ಡ ಸ್ಟೇಡಿಯಂ ನಿರ್ಮಾಣಕ್ಕೆ ಸಿದ್ದರಾಮಯ್ಯ ಒಪ್ಪಿಗೆ! ಏನಿದರ ವಿಶೇಷತೆ?