ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ ಡಿಕೆಶಿಗೆ ‘ದಯವಿಟ್ಟು ಕಾಯಿರಿ, ನಾನು ಕರೆ ಮಾಡುತ್ತೇನೆ’ ಎಂಬ ಸಂದೇಶ ಬಂದಿರೋದು ಭಾರಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರನ್ನೂ ಕಡೆಗಣಿಸುವ ಸ್ಥಿತಿಯಲ್ಲಿಲ್ಲ. ಕರ್ನಾಟಕದಲ್ಲಿ ಪಕ್ಷ ಗಟ್ಟಿಯಾಗಿ ನಿಲ್ಲಬೇಕಾದರೆ ಇಬ್ಬರ ಸಹಭಾಗಿತ್ವ ಅತ್ಯಂತ ಪ್ರಮುಖ ಎಂದು ವರಿಷ್ಠರು ನಂಬಿದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸಮಾಧಾನಪಡಿಸುವುದು ರಾಹುಲ್ ಗಾಂಧಿಯವರ ಮೊದಲ ಆದ್ಯತೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.