ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ಬೆಂಗಳೂರು, ಜನವರಿ 22: ವಿಧಾನ ಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣದ ವೇಳೆ ಸರ್ಕಾರ ಕೊಟ್ಟಿದ್ದನ್ನು ಪೂರ್ತಿ ಓದಿದ ಮೊದಲು, ಕೊನೆ ಪ್ಯಾರಾಗಳನ್ನು ಮಾತ್ರ ಗವರ್ನರ್ ಗೆಹ್ಲೋಟ್ ರೋದೀಗ ಕಾಂಗ್ರೆ ಓದಿಗೆ ಭಾರೀ ವಿರೋಧಕ್ಕೆ ಕಾರಣವಾಗಿದೆ. ಸಿಎಂ, ಸ್ಪೀಕರ್, ಎಲ್ಲ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ಸರ್ಕಾರ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ಸರ್ಕಾರ ಬದ್ಧ. ಜೈಹಿಂದ್, ಜೈ ಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದರು.
ಕೇಂದ್ರ ಸರ್ಕಾರದ ಯೋಜನೆಯ ಹೆಸರೇ ಬದಲಾಗಿ!
ಇನ್ನು ರಾಜ್ಯಪಾಲರಿಗೆ ನೀಡಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರದ ಹೆಸರನ್ನೇ ರಾಜ್ಯ ಸರ್ಕಾರ ಬದಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ‘ರಾಮ್’ ಹೆಸರು ಬಳಸಿದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜಿ ಬದಲಿಗೆ ವಿಬಿ ಗ್ರಾಮ್ ಜಿ ಎಂದು ನಮೂದು ಮಾಡಿದೆ. ರಾಜ್ಯ ಭಾಷಣದ ಪ್ರತಿಯಲ್ಲಿನ ಅಂಶಪಾಲನದಲ್ಲಿ ದಾಖಲಾಗುತ್ತದೆ. ಹೀಗಾಗಿ ಅಧಿಕೃತ ಹೆಸರನ್ನೇ ರಾಜ್ಯ ಸರ್ಕಾರ ಬದಲಾಯಿಸಿದೆ.
ಇದನ್ನೂ ಓದಿ: ಭಾಷಣಕ್ಕೆ ಹರಿಪ್ರಸಾದ್ ಪಟ್ಟು; ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್ ತಡೆದು ಹೈಡ್ರಾಮಾ
ರಾಷ್ಟ್ರಗೀತೆಗೆ ರಾಜ್ಯಪಾಲರಿಂದ ಅವಮಾನ ಆರೋಪ
ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸಿಗರು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರಗೀತೆಗೆ ರಾಜ್ಯಪಾಲರು ಅವಮಾನ ಮಾಡಿದ್ದಾರೆಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ದೂರಿದ್ದು, ಈ ಬಗ್ಗೆ ಸದನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ಒತ್ತಾಯದ ಪ್ರಸಂಗ ನಡೆದಿದೆ.
ರಾಜ್ಯಪಾಲರಿಗೆ ಅಗೌರವ: ಕ್ರಮಕ್ಕೆ ಬಿಜೆಪಿ ಆಗ್ರಹ
ಮತ್ತೊಂದೆಡೆ ರಾಜ್ಯಪಾಲರು ನಿರ್ಗಮಿಸುವ ವೇಳೆ ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದ ಆಡಳಿತ ಪಕ್ಷ ಕಾಂಗ್ರೆಸ್ ನಡೆಗೆ ಬಿಜೆಪಿ ಕಿಡಿ ಕಾರಿದೆ. ಈ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ಗೆ ಲಿಖಿತ ದೂರು ಸಲ್ಲಿಸಿದ ಬಿಜೆಪಿ, ರಾಜ್ಯಪಾಲರಿಗೆ ಅಗೌರವ ತೋರಿದ ಶಾಸಕರು, ಎಂಎಲ್ಸಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದಲ್ಲಿ ಸಭಾಪತಿ ಕಚೇರಿಗೆ ತೆರಳಿ ದೂರು ನೀಡಲಾಗಿತ್ತು, ರಾಜ್ಯಪಾಲರನ್ನು ಅಡ್ಡಗಟ್ಟಿ, ತಳ್ಳಾಡಿ, ನೂಕುನುಗ್ಗಲು ಉಂಟು ಮಾಡಲಾಗಿದೆ ಎಂದು ಆರೋಪಿಸಿದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.