ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ


ಕರ್ನಾಟಕ ಹೈಕೋರ್ಟ್ ಹಾಗೂ ಬೆಂಗಳೂರು ವಕೀಲರ ಸಂಘದ ಪತ್ರಚಿತ್ರದ ಕ್ರೆಡಿಟ್ ಮೂಲ: tv9

ಬೆಂಗಳೂರು, ಜನವರಿ 30: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ (OBC/BCM-A) ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಕೀಲರ ಸಂಘ (ಎಎಬಿ) ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್‌ನ (ಕರ್ನಾಟಕ ಹೈಕೋರ್ಟ್) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಸಂಘವು ಜನವರಿ 28 ರಂದು ಬರೆದ ಈ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದೆ.

ವಕೀಲರ ಕೋಟಾದಡಿ (ಬಾರ್ ಕೋಟಾ) ಇತ್ತೀಚೆಗೆ ಶಿಫಾರಸು ಮಾಡಲಾದ 10 ಅಭ್ಯರ್ಥಿಗಳಲ್ಲಿ ಒಬ್ಬರೂ ಒಬಿಸಿ ಅಥವಾ ಬಿಸಿಎಂ-ಎ ವರ್ಗಕ್ಕೆ ಸೇರಿದವರಿಲ್ಲ ಎಂಬುದು ಸಂಘದ ಮುಖ್ಯ ಆರೋಪವಾಗಿದೆ. ಇದು ಸಂವಿಧಾನದ 15 ಮತ್ತು 16ನೇ ವಿಧಿಗಳ ಅಡಿಯಲ್ಲಿ ನೀಡಲಾದ ಸಮಾನ ಪ್ರಾತಿನಿಧ್ಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಓಬಿಸಿ ಪ್ರಾತಿನಿಧ್ಯದ ಕೊರತೆ

ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿರುವ 38 ಜಡ್‌ಗಳ ಮೇಲಿನ ಕೇವಲ 2 ರಿಂದ 3 ಜನರು ಮಾತ್ರ ಓಬಿಸಿ ಸಮುದಾಯಕ್ಕೆ ಸೇರಿದವರು. ರಾಜ್ಯದ ಜನಸಂಖ್ಯೆಯಲ್ಲಿ ಓಬಿಸಿ ಸಮುದಾಯದ ಪಾಲು ಶೇಕಡಾ 25ಕ್ಕಿಂತ ಹೆಚ್ಚಿದ್ದರೂ, ನ್ಯಾಯಾಂಗದಲ್ಲಿ ಅವರ ಪ್ರಾತಿನಿಧ್ಯ ಕೇವಲ ಶೇಕಡಾ 5 ರಿಂದ 7 ರಷ್ಟಿದೆ ಎಂದು ಸಂಘವು ಅಂಕಿ-ಅಂಶಗಳ ಸಮೇತ ವಿವರಿಸಿದೆ.

ಜಿಲ್ಲಾ ನ್ಯಾಯಾಧೀಶರ ಕೋಟಾದಲ್ಲಿ ಅವಕಾಶ ನೀಡಿ ಹಿಂದುಳಿದ ವರ್ಗಗಳ ನೇಮಕಾತಿಯನ್ನು ಸರಿದೂಗಿಸುವ ಪ್ರಯತ್ನ ಮಾಡಬಾರದು. ಏಕೆಂದರೆ ಅದು ಹಿರಿತನದ ಮೇಲೆ ಆಧಾರಿತವಾಗಿದೆ. ಆದರೆ ವಕೀಲರ ಕೋಟಾದಡಿ ನೇಮಕ ಮಾಡುವಾಗ ಅರ್ಹ ಮತ್ತು ಒಬಿಸಿ ವಕೀಲರಿಗೆ ಹೆಚ್ಚಿನ ಅವಕಾಶವಿದೆ ಎಂದು ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ ಮತ್ತು ಇತರ ಪದಾಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದು, ಸಿದ್ಧಪಡಿಸಲಾದ ಪಟ್ಟಿಗೆ ಒಬಿಸಿ ಸಮುದಾಯದ ಹೆಚ್ಚುವರಿ ಇಬ್ಬರು ಅಭ್ಯರ್ಥಿಗಳನ್ನು ಸೇರಿಸಲು ಶಿಫಾರಸು ಮಾಡಲಾಗಿದೆ. ನ್ಯಾಯಾಂಗದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಈ ಕ್ರಮ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *