ಶಿವಮೊಗ್ಗ, (ಫೆಬ್ರವರಿ 03): ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಜೊತೆಗೆ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ (ಕಾಗೋಡು ತಿಮ್ಮಪ್ಪ) ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಲಾಗಿದೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದ ಕಾರಣ ಉಸಿರಾಟ ಸಮಸ್ಯೆ, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಸದ್ಯ ಅರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.