ಬೆಂಗಳೂರು, (ಫೆಬ್ರವರಿ 22): ಕರ್ನಾಟಕದಲ್ಲಿ (ಕರ್ನಾಟಕ) ಇಲ್ಲಿಯವರೆಗೆ (ಬೇಸಿಗೆ) ಶುರುವಾಗಿದ್ದು, ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಸೇರಿದಂತೆ ಬೆಂಗಳೂರು (ಬೆಂಗಳೂರು) ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳು , ಕಛೇರಿಗಳಲ್ಲಿ ಕೂಲರ್ಗಳನ್ನು ಹಾಕಿಕೊಂಡು ಕೂರುವ ಪರಿಸ್ಥಿತಿ ಇದೆ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ತಾಪಮಾನ ಹೆಚ್ಚಾಗಲಿದೆ. ಹೌದು…ಮಾರ್ಚ್ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ (ಬೇಸಿಗೆ) ಬಿಸಿಲಿನ ಬೇಗೆಗೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಸಿಲಿಕಾನ್ ಸಿಟಿ ಜನ್ರೇ ಎಚ್ಚರದಿಂದ ಇರಿ, ಕೂಲ್ ಸಿಟಿ ಅಂತಾನೇ ಕರೆಸಿಕೊಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ.ಕಳೆದ ಒಂದು ವಾರದಿಂದ ರಾಜಧಾನಿಯಲ್ಲಿ ತಾಪಮಾನ ಏರಿಕೆ ಹಿನ್ನಲೆಯಲ್ಲಿ ಶೇಕೆಯಪ್ಪ ಅಂತ ಸಿಟಿ ಜನ ಶಾಪ್ ಹಾಕೋಕೆ ಶುರು ಮಾಡಿದ್ದಾರೆ. ಮಾರ್ಚ್ 2ನೇ ವಾರದ ಬಳಿಕ ಬೆಂಗಳೂರಿನ ತಾಪಮಾನ 38-39* ಡಿಗ್ರಿ ತಲುಪಲಿದೆ. ಈ ಹಿನ್ನೆಲೆ ಹವಮಾನ ಇಲಾಖೆ ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಜನರ ನೆತ್ತಿ ಸುಡಲಿದೆ. ಇತ್ತ ಹವಮಾನ ಇಲಾಖೆ ಸೂಚನೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಉರಿಯುವ ಬಿಸಿಲಿಗೆ ಹೀಟ್ ಸ್ಟ್ರೋಕ್ ಭೀತಿ ಒಂದು ಕಡೆಯಾದರೆ, ಖಾಯಿಲೆ ತೀವ್ರ ಆತಂಕ ಶುರವಾಗಿದೆ. ತಾಪಮಾನ ಏರಿಕೆ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೀಟ್ ಸ್ಟೋಕ್ ಬಗ್ಗೆ ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಉದ್ಯಾನ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?
ಸಾರ್ವಜನಿಕರಿಗೆ ಎಚ್ಚರಿಕೆ
ಅಂದುಕೊಂಡದಕ್ಕಿಂದ ಈ ಸಲ ಬಿಸಲು ಶೇಖೆ ಜಾಸ್ತಿನೇ ಇರಲಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಲಿದೆ. ಹೀಗಾಗಿ ಹೈಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.
ದೇಹದ ಉಷ್ಣತೆಯು 40 ಡಿಗ್ರಿ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವವಿದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಕೂಡ ಇರಬಹುದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಬಿಸಿಲಿಗೆ ಮೈ ಒಡ್ಡದೆ ವೈದ್ಯರ ಸಲಹೆ ನೀಡುತ್ತಿದ್ದಾರೆ. ಜೊತೆಗೆ ಹೆಚ್ಷಾಗಿ ನೀರು, ತಂಪು ಪಾನೀಯಗಳು ಸೇರಿದಂತೆ ಡಿಹೈಡ್ರೇಟ್ ಆಗದಂತದ ಆಹಾರವನ್ನ ಹೆಚ್ಚಾಗಿ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.
ಒಟ್ಟಿನಲ್ಲಿ ವರ್ಷವೂ ಕೂಡ ಬೆಂಗಳೂರು ಮಂದಿಗೆ ಈ ಧಗೆ ಕಾಡಲಿದೆ, ಜನರು ಬಿಸಿಲಿನಿಂದ ಉಂಟಾಗುವ ಆರೋಗ್ಯದ ಸಮಸ್ಯೆಯಿಂದ ದೂರವಿರಲು ಹೆಚ್ಚು ಗಮನ ಹರಿಸಬೇಕಾಗಿದೆ. ಜೊತೆಗೆ ಆರೋಗ್ಯದಿಂದಲೂ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.