ಬೆಂಗಳೂರು, ಫೆಬ್ರವರಿ 24: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸೀಸ ಮತ್ತು ಕೀಟನಾಶಕಗಳ ಅಂಶಗಳು ಇರಬೇಕಾದ ವಿಚಾರ ಜನರಲ್ಲಿ ಆತಂಕ ಹುಟ್ಟಿಸಿರುವ ನಡುವೆ, ಇತ್ತೀಚಿನ ಆರಂಭದ ಸಮಯದಲ್ಲಿ ನೀರಿನ ಗುಣಮಟ್ಟ ಹದಗೆಟ್ಟ ಶಾಕಿಂಗ್ ರಿಪೋರ್ಟ್ ಹೊರಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಗ್ರಹಿಸಲಾದ ನೀರಿನ ಮಾದರಿಯನ್ನು ಜಲಜೀವನ್ ಮಿಷನ್ ಯೋಜನೆ ಅಡಿಾಲಯ ಪರೀಕ್ಷೆ ನಡೆಸಲಾಯಿತು, ಈ ವೇಳೆ ಕುಡಿಯುವ ನೀರಿನಲ್ಲಿ ರಾಸಾಯನಿಕ ಮತ್ತು ಅದರ ಅಂಶಗಳಿವೆ. 2023 ರಿಂದ 2026 ರ ಫೆಬ್ರವರಿವರೆಗೆ ಸಂಗ್ರಹಿಸಿದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ನೀರು ಕಲುಷಿತಗೊಳ್ಳುತ್ತಿರೋದೇಕೆ?
9.34 ಲಕ್ಷ ಮಾದರಿಯಲ್ಲಿ 53 ಸಾವಿರ ಮಾದರಿಗಳಲ್ಲಿ ರಾಸಾಯನಿಕ ಅಂಶಗಳಿವೆ, 7,696 ನೀರಿನ ಸ್ಯಾಂಪಲ್ಗಳಲ್ಲಿ ಕಂಡುಬರುವ ಅಂಶಗಳು ಕಂಡುಬಂದಿವೆ. ಕೊಳಚೆ ನೀರು ಸೋರಿಕೆ, ಕೈಗಾರಿಕಾ ತ್ಯಾಜ್ಯ ಸೇರ್ಪಡೆ, ಟ್ಯಾಂಕರ್ಗಳಲ್ಲಿ ಫಂಗಸ್ ಉತ್ಪಾದನೆ ಮುಂತಾದವುಗಳೇ ನೀರಿನ ಗುಣಮಟ್ಟ ಕೆಡಲು ಪ್ರಮುಖ ಪರಿಸರವಾಗಿರುವುದರಿಂದ, ನೈಸರ್ಗಿಕ ಜಲಸಂಪನ್ಮೂಲಗಳ ಸಂರಕ್ಷಣೆಗಾಗಿ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಜಲತಜ್ಞ ಟಿ.ವಿ ರಾಮಚಂದ್ರ ಕಳವಳ ವ್ಯಕ್ತಪಡಿಸಿದ್ದು, ನಗರೀಕರಣ ಹಿನ್ನಲೆಯಲ್ಲಿ ವಾತಾವರಣ ಕಾಂಕ್ರಿಟ್ ನಾಡಾಗಿ ಪರಿವರ್ತನೆ ಆಗುತ್ತಿದೆ. ನೈಸರ್ಗಿಕ ಜಲಸಂಪನ್ಮೂಲಗಳು ಕಲುಷಿತ ಆಗುತ್ತಿರುವುದೇ ಇದಕ್ಕೆ ಕಾರಣ. ಜಲಜೀವನ್ ಮಿಷನ್ ಅಡಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ನೀರು ಪೂರೈಕೆ ಆಗುತ್ತಿದೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಸೀಸದ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?
ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ
| ವರ್ಷ | ಪರಿಶೀಲಿಸಿದ ಮಾದರಿ ಸಂಖ್ಯೆ | ರಾಸಾಯನಿಕ ಪತ್ತೆಯಾದ ಮಾದರಿಗಳು | ಪತ್ತೆಯಾದ ಮಾದರಿಗಳು |
| 2023-24 | 2.98 ಲಕ್ಷ | 24917 | 4670 |
| 2024-25 | 3.90 ಲಕ್ಷ | 17261 | 2574 |
| 2025-26 | 2.46 ಲಕ್ಷ | 10911 | 452 |
ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಳವಳ
ಬೆಂಗಳೂರಿನ 142 ಕೆರೆಗಳು ಸಂಪೂರ್ಣ ಕಲುಷಿತಗೊಂಡಿದೆ ಎಂಬ ವರದಿ ಬಂದಾಗ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ, ಈ ಕೆರೆಗಳು ಅಂತರ್ಜಲ ಮಟ್ಟ ಹೆಚ್ಚಿದೆ ಎಂದು ಅತ್ಯಂತ ಹಗುರವಾದ ಹೇಳಿಕೆ ನೀಡಿದ್ದರು. ಕೆರೆಯ ನೀರನ್ನು ನಾವು ನೇರವಾಗಿ ಲೋಟದಲ್ಲಿ ಕುಡಿಯುತ್ತಿಲ್ಲ. ಆದರೆ, ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿರುವ ಅದೇ ಕಲುಷಿತ ಕೆರೆಯ ನೀರು ಅಂತರ್ಜಲವನ್ನು ಸೇರಿ, ನಮ್ಮ ರೈತರ ಬೆಳೆಗಳ ಮೂಲಕ ನಿತ್ಯವೂ ನಮ್ಮ ತಟ್ಟೆಯನ್ನು ಸೇರುತ್ತಿದೆ. ನಿಮ್ಮ ಪ್ರಕಾರ ಅಂತರ್ಜಲವನ್ನು ಬಿಟ್ಟಿರುವ ಆ ಮೋರಿ ಮತ್ತು ಕೈಗಾರಿಕಾ ತ್ಯಾಜ್ಯದ ನೀರು, ಇಂದು ಬೆಂಗಳೂರಿಗರ ಕಿಡ್ನಿ, ಮಿದುಳುಗಳನ್ನು ಹಾಳು ಮಾಡುತ್ತಿದೆ. ಸಮಸ್ಯೆಯ ಮೂಲವನ್ನು ತಡೆಯುವ ಜವಾಬ್ದಾರಿ ಸರ್ಕಾರದ ಮೇಲಿದೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಎಂದು ಹೇಳಿದ್ದಾರೆ.
ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.