
ಬೆಂಗಳೂರು, ಮಾರ್ಚ್ 26: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬಂದರೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಅಂದಾಜಿಸಲಾಗಿದೆ. ಸಾಧಾರಾಣ ಅಥವಾ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಮಿಂಚಿನ ಆರ್ಭಟವೂ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಮಳೆ?
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳು #ಪೂರ್ವಮುಂಗಾರು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ.#KSNDMC #ಆಲಿಕಲ್ಲುಮಳೆ #ಎಚ್ಚರಿಕೆವಹಿಸಿ
ಮುಂದಿನ 5 ದಿನಗಳು #ಮುಂಗಾರು ಮಳೆ #ಮಳೆ #ಮುನ್ಸೂಚನೆ ಗಾಗಿ ನಕ್ಷೆಗಳು #ಕರ್ನಾಟಕ ರಾಜ್ಯದೊಂದಿಗೆ ಜಿಲ್ಲಾವಾರು #ಆಲಿಕಲ್ಲು ಮಳೆ ಎಚ್ಚರಿಕೆಗಳು.
ಮೂಲ: @Indiametdept pic.twitter.com/PiOM6UbeNB— ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ಮಾರ್ಚ್ 25, 2026
ಹವಾಮಾನ ಮುನ್ಸೂಚನೆ ಪ್ರಕಾರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ತಾತ್ಕಾಲಿಕವಾಗಿ ಬಿಸಿಲಿನಿಂದ ನಿರಾಳತೆ ಸಿಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಕೂಡ ಗುಡುಗು-ಮಿಂಚಿನೊಂದಿಗೆ ಗಾಳಿ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ನೀಡುತ್ತದೆ.
ಇದನ್ನೂ ಓದಿ: ಬೆಳಗಾವಿ, ಹಾವೇರಿಯಲ್ಲಿ ಧಾರಾಕಾರ ಮಳೆ; ನದಿಯಂತಾದ ರಸ್ತೆಗಳು, ಬೈಕ್ಗಳು ಮುಳುಗಡೆ
ಉತ್ತರ ಮತ್ತು ಒಳನಾಡಿನಲ್ಲಿ ಬಿಸಿಲಿನ ತಾಪ
ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮುಂದುವರಿಯಲಿದೆ. ದಿನದ ತಾಪಮಾನವು ಸುಮಾರು 32°C ರಿಂದ 36°C ನಡುವೆ ಇರುತ್ತದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ ತಾಪಮಾನವು 32–33°C ತಲುಪಬಹುದು. ಮಟ್ಟವು ಮಧ್ಯಮ ಮಟ್ಟದಲ್ಲಿ ಇರಲಿದೆ.
ಹವಾಮಾನದ ಪ್ರಕಾರ, ಸ್ಥಳೀಯ ಹವಾಮಾನ ವ್ಯವಸ್ಥೆಗಳು ಮತ್ತು ಬದಲಾವಣೆಯ ಪರಿಣಾಮವಾಗಿ ಈ ರೀತಿಯ ಮಿಶ್ರ ಹವಾಮಾನವು ಕಂಡುಬರುತ್ತದೆ. ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ, ಇತರ ಕಡೆಗಳಲ್ಲಿ ಬಿಸಿಲು ತೀವ್ರವಾಗಿದೆ. ದೇಶದ ವಿವಿಧ ಭಾಗಗಳಲ್ಲಿಯೂ ಇದೇ ರೀತಿಯ ಗಾಳಿ-ಮಳೆಯ ಅಸ್ಥಿರತೆ ಕಾಣಿಸಿಕೊಳ್ಳುತ್ತಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.