ಬೆಂಗಳೂರು, ನವೆಂಬರ್ 29: ದಿತ್ವಾ ಚಂಡಮಾರುತದ (ದಿತ್ವಾ ಚಂಡಮಾರುತ) ಪರಿಣಾಮವಾಗಿ ಕರ್ನಾಟಕದಲ್ಲಿ ಚಳಿ ಹಾಗೂ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಮಂಜು, ಚಳಿ ಹೆಚ್ಚಾಗಿದ್ದು, ಇನ್ನೂ 3 ದಿನ ಇರುವ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಇದೆ. ಬೆಂಗಳೂರಿನಲ್ಲಿ ಹವಾಮಾನ 16 ಡಿಗ್ರಿ ಸೆಲ್ಸಿಯಸ್ ಕುಸಿದಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿಗಾಲ ಮುಂದುವರಿಕೆಯಾಗಲಿದೆ. ಇಂದಿನಿಂದ 3 ದಿನ ಇರುವ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ರಾಜಧಾನಿ ಮೈ ಕೊರೆಯುವ ಚಳಿಗೆ ಬೆಂಗಳೂರಿನ ಜನರು ನಡುಗುತ್ತಿದ್ದಾರೆ. ವೀಕೆಂಡ್ ಮೂಡ್ನಲ್ಲಿದ್ದ ಬೆಂಗಳೂರಿನ ಜನರಿಗೆ ಚಳಿ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಕುಸಿದಿದೆ. ದಕ್ಷಿಣ ಒಳನಾಡಿನಲ್ಲಿ 14ರಿಂದ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ದಿತ್ವಾ ಚಂಡಮಾರುತ ಶ್ರೀಲಂಕಾವನ್ನು ದಾಟಿ ಭಾರತದ ಕರಾವಳಿಗೆ ಹತ್ತಿರವಾಗುತ್ತಿರುವ ಮುಂದಿನ ಎರಡು ದಿನಗಳ ಕಾಲ ಇದೇ ವಾತವರಣ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಇದೇ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ