
ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸುಡುವ ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ ತಂದಿದೆ. ಆದರೆ, ಕೆಲವು ಕಡೆ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಂಕಷ್ಟವೂ ಎದುರಾಗಿದೆ.