ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (ದಾವಣಗೆರೆ) ದಂಗಲ್ ತೀವ್ರ ಸ್ವರೂಪದಲ್ಲಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್ನಲ್ಲಿ (ಕಾಂಗ್ರೆಸ್) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಬೈ ಎಲೆಕ್ಷನ್ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಇದರಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ ಆಪ್ತೆ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷ ಅಫ್ರಿನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಸಣ್ಣಪುಟ್ಟ ನಾಯಕರ ತಪ್ಪನ್ನು ಸರಿಯಾಗಿ ಪರಿಗಣಿಸುತ್ತಿರುವ ಕೆಪಿಸಿಸಿ, ಪಕ್ಷ ವಿರೋಧಿ, ಅಶಿಸ್ತು ರೀತಿ ನಡೆದುಕೊಳ್ಳುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಅದರಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತೆ ಆಫ್ರಿನ್ ಖಾನ್ ಅವರನ್ನೂ ಸಹ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು
ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಅಫ್ರಿನ್ ಖಾನ್ ಅವಹೇಳನಕಾರಿ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಈ ಕ್ರಮವನ್ನು ಸ್ಥಾಪಿಸಲಾಗಿದೆ. ಜೊತೆಗೆ ರಿಜ್ವಾನ್ ಅರ್ಷದ್ ಅವರನ್ನು ‘ಮೀರ್ ಸಾದಿಕ್’ ಎಂದು ಉಲ್ಲೇಖಿಸಿ ಪೋಸ್ಟ್ ಮಾಡಿದ್ದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಅಫ್ರಿನ್ ಖಾನ್ ತಲೆದಂಡವಾಗಿದೆ.
ಮೂರ್ಖತನದ ನಿರ್ಧಾರ ಎಂದ ಆಫ್ರಿನ್ ಖಾನ್
ಇನ್ನು ಪಕ್ಷದಿಂದ ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅಫ್ರಿನ್ ಖಾನ್ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ʼನಾನು ಏಪ್ರಿಲ್ 4 ರಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೇನೆ. ಆದರೆ ಇಂದು ನನ್ನನ್ನು ಹೊರಹಾಕಲಾಗಿದೆ. ಇದು ಮೂರ್ಖತನದ ನಿರ್ಧಾರ’ ಎಂದು ಲೇವಡಿ ಮಾಡಿದೆ.
ಜಮೀರ್ ವಿರುದ್ಧವೂ ಕ್ರಮಕ್ಕೆ ಚಿಂತನೆ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದೆ, ಪಕ್ಷ ಒಂದಿಷ್ಟು ಅಲ್ಪಸಂಖ್ಯಾತ ಹಿರಿಯ ಪಕ್ಷ ಎಂಬ ಪಕ್ಷವನ್ನು ಸೋಲಿಸಲು ಹುನ್ನಾರ ಆರೋಪವೂ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವರಿಷ್ಠರು, ಮೇಲ್ಮನೆ ಸದಸ್ಯರಾದ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಕ್ರಮಕೈಗೊಂಡರು. ಇದೀಗ ಹಿಟ್ ಲಿಸ್ಟ್ನಲ್ಲಿ ಜಮೀರ್ ಅಹ್ಮದ್ ಖಾನ್ ಸಹ ಇದ್ದು, ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ, ಮಂತ್ರಿಮಂಡಲದಿಂದ ವಜಾ ಮಾಡಿದರೆ ತಪ್ಪು ಸಂದೇಶ ಹೋಗುತ್ತೆ. ಇದರಿಂದ ಬೇರೆ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ. ಹೀಗಾಗಿ ಜಮೀರ್ ಅವರನ್ನ ಏಕಾಏಕಿ ಸಚಿವ ಸ್ಥಾನದಿಂದ ವಜಾ ಮಾಡುವುದು ಸರಿಯಲ್ಲ ಎಂದು ಹೈಕಮಾಂಡ್ ಗೆ ತಿಳಿಸಲಾಗಿದೆ. ಹೀಗಾಗಿ ಹೈಕಮಾಂಡ್ ಜಮೀರ್ ಅಹ್ಮದ್ ಖಾನ್ ವಿಷಯದಲ್ಲಿ ಕಾದು ನೋಡುವ ಮೊರೆ ಹೋಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 9:08 pm, ಬುಧವಾರ, 15 ಏಪ್ರಿಲ್ 26