Bigg Boss Kannada 12 ಶೋ ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ: ಕಿಚ್ಚ ಸುದೀಪ್‌ ಹೇಳಿದ್ದೇ ಬೇರೆ!

Bigg Boss Kannada 12 ಶೋ ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ: ಕಿಚ್ಚ ಸುದೀಪ್‌ ಹೇಳಿದ್ದೇ ಬೇರೆ!



Bigg Boss Kannada 12 ಶೋ ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ: ಕಿಚ್ಚ ಸುದೀಪ್‌ ಹೇಳಿದ್ದೇ ಬೇರೆ!
<p>ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಒಂದು ದಿನಗಳ ಕಾಲ ಬಂದ್‌ ಆಗಿತ್ತು. ಹೌದು, ಈ ಶೋಗೆ ಬೀಗ ಹಾಕಲಾಗಿತ್ತು. ಕನ್ನಡ ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿ ಆಗಿತ್ತು. ಈಗ ಈ ಬಗ್ಗೆ ಕಿಚ್ಚ ಸುದೀಪ್‌ ಅವರು ಕಿಚ್ಚನ ಪಂಚಾಯಿತಿಯಲ್ಲಿ ಮಾತನಾಡಿದ್ದಾರೆ.</p><p>&nbsp;</p><img><p>“ಬಿಗ್‌ ಬಾಸ್‌ ಶೋ ಯಾವುದೇ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಬಿಗ್‌ ಬಾಸ್‌ ಕನ್ನಡ ಶೋಗೂ, ಆಗಿರುವ ಸಮಸ್ಯೆಗೂ ಯಾವುದೇ ಸಂಬಂಧ ಇಲ್ಲ. ಬಿಗ್‌ ಬಾಸ್‌ ಶೋ ನಡೆಯುವ ಜಾಗದವರಿಗೆ ಸಂಬಂಧಪಟ್ಟಿದ್ದು” ಎಂದು ಕಿಚ್ಚ ಸುದೀಪ್‌ ಹೇಳಿದ್ದಾರೆ.</p><img><p>“ಯಾವಾಗಲೂ ಖಾಲಿ ಜಾಗಕ್ಕೆ ಬೆಲೆ ಇರೋದಿಲ್ಲ, ಅಲ್ಲಿ ಏನಾದರೂ ಇದ್ದಾಗ ಮಾತ್ರ ಸೌಂಡ್‌ ಆಗೋದು. ಈ ಸಮಯದಲ್ಲಿ ನಮ್ಮ ಕರೆಗೆ ಓಗುಟ್ಟ ಡಿಕೆ ಶಿವಕುಮಾರ್‌ ಹಾಗೂ ನಲಪಾಡ್‌ಗೂ ಅವರಿಗೆ ಧನ್ಯವಾದಗಳು” ಎಂದು ಕಿಚ್ಚ ಸುದೀಪ್‌ ಹೇಳಿದ್ದಾರೆ.</p><img><p>ಬಿಗ್‌ ಬಾಸ್‌ ಕನ್ನಡ 12 ಶೋನವರು ಶೋ ಆರಂಭ ಆಗುವ ಮುನ್ನ ಪರಿಸರ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ, ಅಷ್ಟೇ ಅಲ್ಲದೆ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಿಲ್ಲ ಎಂದು ಆರೋಪ ಮಾಡಲಾಗಿತ್ತು.</p><img><p>ಬಿಗ ಬಾಸ್‌ ಶೋಗೆ ಬೀಗ ಹಾಕಿದಬಳಿಕ ಎಲ್ಲ ಸ್ಪರ್ಧಿಗಳನ್ನು ಆರಂಭದಲ್ಲಿ ಒಂದು ಥಿಯೇಟರ್‌ನಲ್ಲಿ ಇಡಲಾಗಿತ್ತು, ಆ ಬಳಿಕ ಅವರನ್ನು ರೆಸಾರ್ಟ್‌ನಲ್ಲಿ ಇಡಲಾಗಿತ್ತು. ಒಂದೂವರೆ ದಿನಕ್ಕೆ ಮತ್ತೆ ಬಿಗ್‌ ಬಾಸ್‌ ಶೋ ಶುರುವಾಗಿದೆ.</p><img><p>ಬಿಗ್‌ ಬಾಸ್‌ ಶೋ ಅಷ್ಟೇನೂ ನಿಯಮ ಉಲ್ಲಂಘನೆ ಮಾಡಿಲ್ಲ, ಬೆಂಗಳೂರಿನಲ್ಲಿ ಎಷ್ಟು ಕಡೆ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಲಾಗಿದೆ, ಅದರ ಬಗ್ಗೆ ಯಾಕೆ ಯಾರೂ ಕೇಳಿಲ್ಲ ಎಂದು ಅನೇಕರು ಆರೋಪ ಹೊರಿಸಿದ್ದರು. ಈಗ ಮತ್ತೆ ಬಿಗ್‌ ಬಾಸ್ ಶುರುವಾಗಿದೆ.</p>



Source link

Leave a Reply

Your email address will not be published. Required fields are marked *