
ಹೀಗಾಗಿ ಇಲ್ಲೊಂದು ಕರಡಿ ಸಂರಕ್ಷಣ ವಲಯ ಮಾಡುವಂತೆ ಅರಣ್ಯ ಅಧಿಕಾರಿಗಳಿಗೆ, ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಾ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇನ್ನು ಕತ್ತಲಾದರೆ ಸಾಕು ಆಹಾರವನ್ನು ಅರಸಿ ಕರಡಿಗಳು ಹಿಂಡು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತವೆ. ಶಾಸಕ ಜನಾರ್ಧನ ರೆಡ್ಡಿ ಅವರು ಕಾಯ್ದಿಟ್ಟ ಅರಣ್ಯದಲ್ಲಿ ಕರಡಿಧಾಮ ಮಾಡುತ್ತೇವೆ ಎಂದು ಹೇಳಿದರೂ ಈವರೆಗೆ ಯಾವುದೇ ಕ್ರಮ ವಹಿಸಿಲ್ಲ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕರಡಿಗಳ ಸಂರಕ್ಷಣೆ ಹಾಗೂ ರೈತರ ಬೆಳೆ ಮತ್ತು ರೈತರ ಜೀವ ಜೀವ ಉಳಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:
ಕಾಫಿ ಕುಡಿಯುತ್ತಾ ತನ್ನ ಸಾವಿನ ವದಂತಿಗೆ ಪ್ರತಿಕ್ರಿಯಿಸಿದ ಇಸ್ರೇಲ್ ಪ್ರಧಾನಿ ನೇತನ್ಯಾಹು