
<p>ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ, ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುವುದನ್ನು ಪ್ರಶ್ನಿಸಿದ್ದಕ್ಕೆ ಹಿರಿಯ ನ್ಯಾಯವಾದಿ ಪ್ರಭಾಕರ್ ಮತ್ತು ಅವರ ಪತ್ನಿ ಮೇಲೆ ಜುಬೇರ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ. ಈ ಘಟನೆಯನ್ನು ಖಂಡಿಸಿ ವಕೀಲರು ಮತ್ತು ಸಾರ್ವಜನಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.</p><img><p>ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಿರಿಯ ನ್ಯಾಯವಾದಿ ಪ್ರಭಾಕರ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಲಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ವಕೀಲರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.</p><img><p>ಬಸವೇಶ್ವರ ನಗರದ ಬಂಬು ಬಜಾರದಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ತಿಳಿ ಹೇಳಿದಕ್ಕೆ ಜುಬೇರ್ ಎಂಬ ಮುಸ್ಲಿಂ ಯುವಕ ಹಲ್ಲೆ ಮಾಡಿದ್ದಾನೆ.</p><img><p>ನ್ಯಾಯವಾದಿ ಪ್ರಭಾಕರ್ ಹಾಗೂ ಅವರ ಪತ್ನಿ ವಾಯುವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ಜುಬೇರ್ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು ಇದಕ್ಕೆ ವಕೀಲರಾದ ಪ್ರಭಾಕರ್ ದಂಪತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p><img><p>ಇದರಿಂದ ಸಿಟ್ಟಿಗೆದ್ದ ಜುಬೇರ್ ವಕೀಲರ ಮೇಲೆ ಮೊದಲು ಹಲ್ಲೆ ಮಾಡಿದ್ದು, ಹಲ್ಲೆಯನ್ನು ಬಿಡಿಸಲು ಬಂದ ಅವರ ಪತ್ನಿ ಮೇಲೂ ಆರೋಪಿ ಹಲ್ಲೆ ಮಾಡಿದ್ದಾನೆ.</p><img><p>ಈ ವಿಚಾರ ತಿಳಿದ ವಕೀಲರು ಹಾಗೂ ಸಾರ್ವಜನಿಕರು ಗಂಗಾವತಿ ಠಾಣೆ ಮುಂದೆ ಜಮಾಯಿಸಿ ಹಲ್ಲೆಯನ್ನು ಖಂಡಿಸಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.</p><p><strong>ಇದನ್ನೂ ಓದಿ: </strong><strong>ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ</strong></p><img><p>ವಿಚಾರ ತಿಳಿದು ಮಾಜಿ ಸಂಸದ ಶಿವರಾಮಗೌಡ. ಮಾಜಿ ಶಾಸಕ ಮುನವಳ್ಳಿ ಠಾಣೆಗೆ ಆಗಮಿಸಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿ ಠಾಣೆಯಲ್ಲೇ ಕುಳಿತಿದ್ದಾರೆ ಇದರಿಂದ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p><p><strong>ಇದನ್ನೂ ಓದಿ:</strong><strong> ಗೆಳತಿ ಹಾಗೂ ಸ್ನೇಹಿತರ ಮುಂದೆ ಅಪ್ರಾಪ್ತ ಬಾಲಕನ ಬಿಲ್ಡಪ್: ಪ್ರಶ್ನಿಸಿದ್ದಕ್ಕೆ ಹದಿಹರೆಯದ ಯುವಕನ ಕೊಲೆ</strong></p>
Source link
ಗಂಗಾವತಿಯಲ್ಲಿ ಹಿರಿಯ ವಕೀಲರ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ: ಠಾಣೆಗೆ ಮುತ್ತಿಗೆ ಹಾಕಿದ ವಕೀಲರು