
ಪೊಲೀಸರು ಹೇಳುವ ಪ್ರಕಾರ, ಸಿಕಂದರ್ ಮೊದಲು ತನ್ನ ಹೆಂಡತಿ ಪ್ರಿಯಾಂಕಾ (28) ಮತ್ತು ತಾಯಿ ರೂನಾ ದೇವಿ (60) ಅವರ ಮೇಲೆ ಮನೆಯ ಮೇಲ್ಛಾವಣಿಯ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದ್ದಾನೆ. ನಂತರ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಕೊಂಡು ಅವರ ತಲೆಗಳನ್ನು ಪದೇ ಪದೇ ಒಡೆದು, ಇಬ್ಬರನ್ನೂ ಸ್ಥಳದಲ್ಲೇ ಕೊಂದಿದ್ದಾನೆ. ಬಳಿಕ ಶವಗಳನ್ನು ವಿರೂಪಗೊಳಿಸಿ, ತಲೆಬುರುಡೆಯಿಂದ ಮಾಂಸವನ್ನು ತೆಗೆದು, ಇಡೀ ಗ್ರಾಮದವರ ಮುಂದೆ ಅದನ್ನು ಸೇವಿಸಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯ ಮಾನಸಿಕ ಸ್ಥಿತಿಯನ್ನು ಸಹ ಪರಿಶೀಲಿಸುತ್ತಿದ್ದಾರೆ. ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಮಿಶ್ರಾ ಹೇಳಿದ್ದಾರೆ.