ಗದಗ, (ಜನವರಿ 27): ಐತಿಹಾಸಿಕ ಲಕ್ಕುಂಡಿ (ಲಕ್ಕುಂಡಿ) ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್ಗಳಲ್ಲಿ ಉತ್ಖನನ ನಡೆಯುತ್ತಿದೆ, 10 ಅಡಿ ಆಳ ತೆಗೆದ ನಂತರ A-1 ಬಾಕ್ಸ್ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳು ಕಾಡುತ್ತಿದೆ. ಇನ್ನು B-1 ಬ್ಲಾಕ್ನಲ್ಲಿ ಬೃಹತ್ ಗಾತ್ರದ ಕಲ್ಲು ಇದ್ದಿದ್ದು, ಕಲ್ಲು ಬೀಳುವ ಭೀತಿ ಎದುರಾಗಿದೆ. ಎ-ಬ್ಲಾಕ್ನಲ್ಲಿ ಬಂಡೆಗಳ ಸಮೂಹ ಉತ್ಖನನ ಕಾರ್ಯಕ್ಕೆ ತೀವ್ರ ತೊಂದರೆ ಎದುರಾಗಿದೆ. ಸುಮಾರು 35 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಅಪಾಯಕಾರಿ ಪರಿಸ್ಥಿತಿಗಳ ನಡುವೆ ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 10ನೇ ದಿನವಾದ ಇಂದು (ಜನವರಿ 27) ಉತ್ಖನನ ವೇಳೆ ಪ್ರಾಚ್ಯವಶೇಷವಿದೆ. ಹೌದು..ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯವಶೇಷ ಏನಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.