Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ

Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ



Lakshmi Nivasa:​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ
<p>’ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ವಿಶ್ವನ ತಾಯಿ ಲಲಿತಾ ಪಾತ್ರವನ್ನು ಹಠಾತ್ತನೆ ಅಂತ್ಯಗೊಳಿಸಲಾಗಿದೆ. ಜಯಂತ್‌ನಿಂದ ತಳ್ಳಲ್ಪಟ್ಟು ಸಾವನ್ನಪ್ಪುವ ದೃಶ್ಯದ ಮೂಲಕ ನಟಿ ವಿಜಯಲಕ್ಷ್ಮಿ ಸುಬ್ರಮಣಿ ಅವರ ಪಾತ್ರಕ್ಕೆ ಮುಕ್ತಾಯ ಹಾಡಲಾಗಿದೆ. &nbsp;ಇದೀಗ ಸನ್ಮಾನ ಮಾಡಿರುವ ಬಗ್ಗೆ ನಟಿ ಹೇಳಿದ್ದೇನು?</p><img><p>ಲಕ್ಷ್ಮೀ ನಿವಾಸ (Lakshmi Nivasa) ಸೀರಿಯಲ್​ನಲ್ಲಿ ವಿಶ್ವನ ತಾಯಿ ಲಲಿತಾ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ಸುಬ್ರಮಣಿ (vijayalakshmi Subramani) ನಟಿಸುತ್ತಿದ್ದರು. ಆದರೆ ಅವರ ಪಾತ್ರವನ್ನು ಈಗ ಮುಗಿಸಲಾಗಿದೆ. ಮನೆ ಬಿಟ್ಟು ಹೋಗಿರುವ ಜಾಹ್ನವಿ, ತನ್ನ ಸ್ನೇಹಿತೆಯ ಮಗಳು ಎಂದು ಗೊತ್ತಾದ ತಕ್ಷಣ ಆಕೆಯನ್ನು ವಾಪಸ್​ ಮನೆಗೆ ಕರೆದು ಆಕೆಗೆ ತಾಯಿಯ ಪ್ರೀತಿ ನೀಡಿದ ಲಲಿತಾ ಅವರನ್ನು ಸಾಯಿಸುವ ಮೂಲಕ ಪಾತ್ರಕ್ಕೆ ಮುಕ್ತಾಯ ಹಾಡಲಾಗಿದೆ.</p><img><p>ಜಾಹ್ನವಿಯನ್ನು ಹುಡುಕಿಕೊಂಡು ವಿಶ್ವನ ಮನೆಗೆ ಜಯಂತ್​ ಬರುತ್ತಾನೆ. ಆದರೆ, ಲಲಿತಾ ಆತನನ್ನು ತಡೆಯುತ್ತಾಳೆ. ನನ್ನ ಕೊನೆಯ ಉಸಿರು ಇರುವವರೆಗೂ ನಾನು ಅವಳನ್ನು ಭೇಟಿಯಾಗಲು ಬಿಡುವುದಿಲ್ಲ ಎನ್ನುತ್ತಾಳೆ. ಇದರಿಂದ ಕೋಪಗೊಂಡ ಜಯಂತ್​ ಆಕೆಯನ್ನು ದೂಕಿದಾಗ ಅಲ್ಲಿಯೇ ಲಲಿತಾ ಸಾವನ್ನಪ್ಪುತ್ತಾಳೆ.</p><img><p>ಈ ದೃಶ್ಯದ ಅವಶ್ಯಕತೆಯೇ ಇರಲಿಲ್ಲ. ಆದರೂ ತಮ್ಮನ್ನು ವಿನಾಕಾರಣ ಸಾಯಿಸಲಾಗಿದೆ ಎಂದು ನಟಿ ವಿಜಯಲಕ್ಷ್ಮಿ ಅವರು ಇದಾಗಲೇ ಕೆಲವು ಪೋಸ್ಟ್​ಗಳ ಮೂಲಕ ಅಸಮಾಧಾನ ಹೊರಹಾಕಿದ್ದರು. ಒಂದು ಒಳ್ಳೆ ಪಾತ್ರವನ್ನ ಸುಖಾಸುಮ್ಮನೆ ಸಾಯಿಸೋದು? ಈ ಧಾರಾವಾಹಿಗೆ ಕಥೆ ಮಾಡುವವರ ಪಾಂಡಿತ್ಯ ನಿಪುಣತೆಗೆ ಕನ್ನಡಿ ಹಿಡಿದಿದೆ ಎನ್ನುತ್ತಾ ತಮ್ಮ ಪಾತ್ರವನ್ನು ಸಾಯಿಸಿರುವ ಬಗ್ಗೆ ನೋವು ತೋಡಿಕೊಂಡಿದ್ದರು ನಟಿ.</p><img><p>ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ನೊಂದು ಪೋಸ್ಟ್​ ಹಾಕಿದ್ದಾರೆ. ಅದರಲ್ಲಿ ಲಲಿತಾ ಸಾವಿನ ಬಳಿಕ, ಅವರ ರೋಲ್​ ಮುಗಿದ ಕಾರಣ ಅವರನ್ನು ಆತ್ಮೀಯವಾಗಿ ಸೀರಿಯಲ್​ನಿಂದ ಬೀಳ್ಕೊಟ್ಟ ದೃಶ್ಯವಿದೆ.</p><img><p>ಇದರಲ್ಲಿ ಜಯಂತ್​ ಪಾತ್ರಧಾರಿ ದೀಪಕ್ ಸುಬ್ರಹ್ಮಣ್ಯ (Deepak Subramanya) ಅವರು ಕೇಕ್​ ಕಟ್​ ಮಾಡುವುದನ್ನು ನೋಡಬಹುದಾಗಿದೆ. ಕೇಕ್​ ತಂದು ಅದರಲ್ಲಿ ವಿಜಯಲಕ್ಷ್ಮಿ ಅವರಿಗೆ ವಿಷ್​ ಮಾಡಲಾಗಿದೆ. ಅದನ್ನು ಶೇರ್​ ಮಾಡಿಕೊಂಡಿರೋ ನಟಿ, ಕೊನೆ ದಿನದ ಲಲಿತಾ ಸಾವಿನ ಚಿತ್ರೀಕರಣ ಮುಗಿದ ನಂತರ ಜಯಂತ್ ಕೈಯಲ್ಲೆ ಪೇಟ ತೋಡಿಸಿ ಸನ್ಮಾನ ಮಾಡಿದ್ದು ಎಂದು ತಮಾಷೆಯಿಂದ ಬರೆದುಕೊಂಡಿದ್ದಾರೆ.</p><img><p>ಆದರೆ, ಇದು ತಮಾಷೆಯಲ್ಲ, ನೋವಿನ ವಿಷಯವೆನ್ನುವುದು ಅವರ ಮುಂದಿನ ಲೈನ್​ಗಳಲ್ಲಿ ತಿಳಿಯುತ್ತದೆ. ನಾನು ನನ್ನ ಪಾತ್ರ ಸೀರಿಯಲ್ ನಲ್ಲಿ ಮುಗಿದ ಮೇಲೆ ಮಲೇಷ್ಯಾಗೆ ಹೋಗಿದ್ದೆ. ನಾನು ಬೇರೆ ಯಾವ ಪ್ರಾಜೆಕ್ಟೂ ಒಪ್ಪಿಕೊಂಡಿರಲಿಲ್ಲ, ನನ್ನ ಪಾತ್ರಕ್ಕೆ ಅಂತ್ಯ ಹಾಡಿರೋದು ನನ್ನಿಂದಲ್ಲ, ಕಾರಣ ನನಗೆ ಇದುವರೆಗೂ ಗೊತ್ತಿಲ್ಲ ಎಂದು ನಟಿ ನೋವು ತೋಡಿಕೊಂಡಿದ್ದಾರೆ.</p>



Source link

Leave a Reply

Your email address will not be published. Required fields are marked *