
ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಆಗ ಅವರ ನಿವಾಸಕ್ಕೆ ಆಗಮಿಸಿದ ಯುವಕನೊಬ್ಬ, ಅತಿವೃಷ್ಟಿಯಿಂದ ಹಾಳಾಗಿದ್ದ ತೊಗರಿ ಬೆಳೆ ತೋರಿಸಿ, ‘ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ, ಸರ್’ ಎಂದ. ಈ ವೇಳೆ ಕೋಪಗೊಂಡ ಖರ್ಗೆ, ‘ತೊಗರಿ ಬೆಳೆ ಹಾನಿಯಾಗಿದ್ದನ್ನು ನನಗೆ ತೋರಿಸಲು ಬಂದಿರುವೆಯಾ?. ನಿನ್ನ ತೊಗರಿ ಎಷ್ಟು ಹಾಳಾಗಿದೆ?’ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು. ‘ನಾಲ್ಕು ಎಕರೆಯಲ್ಲಿನ ಬೆಳೆ ಹಾಳಾಗಿದೆ ಸರ್’ ಎಂದು ಯುವಕ ವಿನಮ್ರನಾಗಿ ನುಡಿದ.
ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ,
ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು?
ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ… pic.twitter.com/6mb0HoT3kK
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 8, 2025