ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಆರ್ಆರ್ ಗ್ರೌಂಡ್ ಬಳಿ ನಡೆಸುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದರೆ, ಬಂಧನದ ವೇಳೆ ಇನ್ಸ್ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.