
<p>ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ</p><p> </p><img><p>ಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅಟ್ರಾಸಿಟಿ ಪ್ರಕರಣ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಕೊಡಿಸಲು ಇಬ್ಬರು ಪೊಲೀಸ್ ಪೇದೆಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.</p><img><p>ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳಾದ ಮಾರುತಿ ಬ್ಯಾಳಿ ಹಾಗೂ ಚಂದಾಲಿಂಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಾಹಿತಿ ಪಡೆದ ಕೊಪ್ಪಳ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರು ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.</p><img><p>ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡೋದಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಲ ಈ ಕುರಿತು ಮೆಹಬೂಬ್ ಪಾಶಾ ಬಳಿಯಿಂದ 15 ಸಾವಿರ ರೂಪಾಯಿ ಹಣ ಪಡೆದಿದ್ದರು. ಫೋನ್ ಪೇ ಮೂಲಕ ಪೇದೆಗಳು 15 ರೂಪಾಯಿ ಹಣ ಪಡೆದುಕೊಂಡಿದ್ದರು.</p><img><p>15 ಸಾವಿರ ರೂಪಾಯಿ ಹಣ ಪಡೆದ ಬಳಿಕ ಬಾಕಿ ಮೊತ್ತ ಮೂರು ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ.</p><h2>ಮೂರು ಸಾವಿರ ಪಡೆಯುವಾಗ ಬಲೆಗೆ</h2>
Source link
ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ