ಬಿಜೆಪಿ ನಿಯೋಗ, ಮುಸ್ತಫಾ ಖಾದ್ರಿ, ಹಿಂದೂ ಯುವತಿಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ
ಕೊಪ್ಪಳ, ಏಪ್ರಿಲ್ 17: ಜಿಲ್ಲೆಯಲ್ಲಿ ಈಗ ಲವ್ ಜಿಹಾದ್ (ಲವ್ ಜಿಹಾದ್) ಆತಂಕ ಮನೆಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಲವ್ ಜಿಹಾದ್ ಚರ್ಚೆ ಜೋರಾಗಿದೆ. ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಜಿಲ್ಲೆಯಲ್ಲಿ ಸಂಚಲನ ಮೂಡಿಸಿವೆ. 16 ಯುವತಿಯರ ಸಾವಿರಾರು ವಿಡಿಯೋಗಳು ಆತನ ಫೋನ್ನಲ್ಲಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಜೆಪಿ (ಬಿಜೆಪಿ) ನಿಯೋಗ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಕೂಡಲೇ ಕ್ರಮಕ್ಕೆ ಮುಂದಾಗಿದೆ. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಬಿಜೆಪಿ ತಿಳಿಸಿದೆ.
ಎಸ್ಪಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ
ಕೊಪ್ಪಳದಲ್ಲಿ ಈಗ ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಆರೋಪಗಳು ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಲವ್ ಜಿಹಾದ್ ಕೃತ್ಯ ಎಸಗುತ್ತಿರುವ ಆರೋಪ ಹಿನ್ನಲೆ ಮುಸ್ತಫಾ ವಿರುದ್ಧ ಈವರೆಗೂ ಕ್ರಮಕೈಗೊಳ್ಳದ ಹಿನ್ನೆಲೆ, ಇಂದು ಎಂಎಲ್ ಸಿ ಹೇಮಲತಾ ನಾಯಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಎಸ್ ಪಿ ಡಾ. ರಾಮ್ ಎಲ್. ಅರಸಿದ್ದಿ ಮನವಿ ಸಲ್ಲಿಸಿದೆ.
ಮತಾಂತರ ಆರೋಪ
ಬಿಜೆಪಿ ನಾಯಕರ ಆರೋಪದ ಪ್ರಕಾರ ಮುಸ್ತಫಾ ಖಾದ್ರಿ ಅಮಾಯಕ ಹಿಂದೂ ಯುವತಿಯರನ್ನು ಪುಸಲಾಯಿಸಿ ಮತಾಂತರ ಮಾಡಲು ಪ್ರಯತ್ನಿಸಿದ್ದಾನೆ. ಆತನ ಮೊಬೈಲ್ನಲ್ಲಿ ಬರೋಬ್ಬರಿ 16 ಜನ ಹಿಂದೂ ಯುವತಿಯರ 9 ಸಾವಿರ ವಿಡಿಯೋಗಳು ಹಾಗೂ 7ಸಾವಿರಕ್ಕೂ ಅಧಿಕ ಫೋಟೋಗಳು ಫೋನ್ ಇವೆ. ಕೂಡಲೇ ಆತನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಮನವಿ ಸಲ್ಲಿಸಿದರು.
ಇದನ್ನೂ ಓದಿ: “ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್
ಪೊಲೀಸ್ ಇಲಾಖೆಯ ವಿಳಂಬ ಧೋರಣೆ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಎಫ್ಎಸ್ಎಲ್ ವರದಿ ಬರುವ ಮುನ್ನವೇ ಆ ವಿಡಿಯೋಗಳು ವೈರಲ್ ಆದರೆ ಅಮಾಯಕ ಯುವತಿಯರ ಗತಿ ಏನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸ್ಥಳೀಯ ಶಾಸಕರು ಮತ್ತು ಸಂಸದರ ಒತ್ತಡಕ್ಕೆ ಮಣಿದ ಪೊಲೀಸರು ಮುಸ್ತಫಾನನ್ನು ಬಂಧಿಸುತ್ತಿಲ್ಲ ಎಂಬ ಗಂಭೀರ ಆರೋಪವೂ ನಡೆದಿದೆ.
ಹೋರಾಟದ ಎಚ್ಚರಿಕೆ
ಗಾಂಜಾ, ಹುಕ್ಕಾ ಅಥವಾ ಮಟ್ಕಾ ದಂಧೆಗೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್ ಆಗಿವೆ. ಮುಸ್ತಫಾ ಕೇವಲ ಲವ್ ಜಿಹಾದ್ ಆರೋಪಿಯಷ್ಟೇ ಅಲ್ಲ, ಆತ ಮಟ್ಕಾ ಕಿಂಗ್ ಪಿನ್ ಕೂಡ ಆಗಿದ್ದಾನೆ. ಗಾಂಜಾ ಸೇವನೆಯ ವೀಡಿಯೋಗಳು ಲಭ್ಯವಿದ್ದರೂ, ನಿಷೇಧಿತ ಹುಕ್ಕಾ ಆತನಿಗೆ ಎಲ್ಲಿಂದ ಸಿಗುತ್ತಿದೆ ಎಂದು ಪ್ರಶ್ನಿಸಿರುವ ಬಿಜೆಪಿ, ಆತನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದು, ಮುಸ್ತಫಾ ಬಂಧನವಾಗದೆ ಹೋರಾಟ ನಡೆಸಲಾಗುತ್ತಿದೆ.
ಇದನ್ನೂ ಓದಿ: ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇ? ಪೊಲೀಸರಿಗೆ ಕಾಂಗ್ರೆಸ್ ಶಾಸಕರಿಂದ ಒತ್ತಡದ ಆರೋಪ
ಸದ್ಯ ಎಸ್ಪಿ ಕಚೇರಿಗೆ ಮನವಿ ಸಲ್ಲಿಸಿರುವ ಬಿಜೆಪಿ, ಒಂದು ವೇಳೆ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಮತ್ತೊಂದು ಕಡೆ ಪ್ರಕರಣ ರಾಜಕೀಯ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಮುಸ್ತಫಾ ಬಳಿ ಇದ್ದ ಮೊಬೈಲ್ಗಳು ಇದುವರೆಗೂ ಓಪನ್ ಆಗಿಲ್ಲ, ಮೊಬೈಲ್ ಆದ ಬಳಿಕವೇ ಪ್ರಕರಣದ ಅಸಲಿಯತ್ತು ಬಯಲಾಗಲಿದೆ. ಎರಡು ಮೊಬೈಲ್ಗಳನ್ನು ಪೊಲೀಸರು ರವಾನೆ ಮಾಡಿದ್ದು, ಆರೋಪಿ ಮುಸ್ತಫಾರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಐಟಿ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾದ ಕಾರಣ ಕೊಪ್ಪಳ ಸೈಬರ್ ಕ್ರೈಂ ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.