
ಪ್ರಸ್ತುತ ಚಾಲ್ತಿಯಲ್ಲಿರುವ ನೇರಳೆ, ಹಸಿರು ಮಾರ್ಗಗಳು ಕೂಡ ಎರಡು, ಮೂರು ಹಂತಗಳಲ್ಲಿ ಲೋಕಾರ್ಪಣೆ ಆಗಿವೆ. ಕಾಳೇನ ಅಗ್ರಹಾರ (ಗೊಟ್ಟಿಗೆರೆ) ಹಾಗೂ ನಾಗವಾರ ಸಂಪರ್ಕಿಸುವ ಗುಲಾಬಿ ಮಾರ್ಗವನ್ನು ಕೂಡ ಎರಡು ಹಂತದಲ್ಲಿ ಜನಸಂಚಾರಕ್ಕೆ ತೆರೆಯಲು ಬಿಎಂಆರ್ಸಿಎಲ್ ಯೋಜಿಸಿದೆ. ಈಗ ನೀಲಿ ಮಾರ್ಗವನ್ನು ಕೂಡ ಇದೇ ಮಾದರಿಯಲ್ಲಿ ತೆರೆಯಲಾಗುವುದು ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಇನ್ನು ಐದು ತಿಂಗಳಲ್ಲಿ ಶೇಕಡಾ 5ರಷ್ಟು ಮೆಟ್ರೋ ಟಿಕೆಟ್ ದರ ಏರಿಕೆ, ಬೆಂಗಳೂರಿಗರಿಗೆ ಶಾಕ್