Headlines

ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ

ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ


ಇತ್ತೀಚಿನ, ಡಿಸೆಂಬರ್ 19: ದೀರ್ಘಕಾಲದ ಕೌಟುಂಬಿಕ ಕಲಹ ಹತ್ಯೆ(ಕೊಲೆ)ಯಲ್ಲಿ ಅಂತ್ಯಗೊಂಡಿದೆ. ನವೆಂಬರ್ 30 ರಂದು ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಈ ಘಟನೆ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬುವವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.ಅವರ ದೇಹದಲ್ಲಿ 69 ಗುಂಡುಗಳು ಇವೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಹತ್ಯೆಗೆ ಸುಪಾರಿಕೊಟ್ಟು ಕಿಲ್ಲರ್‌ಗಳನ್ನು ನೇಮಿಸಿಕೊಂಡಿರಬಹುದು ಎಂಬ ಅನುಮಾನ ಮೂಡಿದೆ. ರತನ್ ಲೋಹಿಯಾ ಕೆಲಸಕ್ಕಾಗಿ ಮನೆಯಿಂದ ಹೊರಗೆ ಬಂದಾಗ , ಪುರುಷರ ಗುಂಪೊಂದು ಅವರನ್ನು ಸುತ್ತುವರೆದು ಗುಂಡಿನ ಸುರಿಮಳೆಗೈದಿದ್ದರು. ರತನ್ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪರಾಧ ನಡೆದ ಸ್ಥಳವನ್ನು ತಲುಪಿದಾಗ, ಪೊಲೀಸರು ಖಾಲಿ ಶೆಲ್‌ಗಳು ಮತ್ತು ಮೂರು ಲೈವ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡರು. ನವೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಆಯಾ ನಗರದ ಭಾನುವಾರ ಮಾರುಕಟ್ಟೆಯ ಬಳಿ ಕಪ್ಪು ಬಣ್ಣದ ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ಮೂವರು ದಾಳಿಕೋರರು ರತನ್ಗಾಗಿ ಕಾಯುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಕಾರಿನ ನಂಬರ್ ಪ್ಲೇಟ್‌ಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ ಎಂದು ಸೂಚಿಸಲಾಗಿದೆ.

ರಾಂಬೀರ್ ಲೋಹಿಯಾ ಮತ್ತು ಆತನು ರಾಂಭೀರ್ ಅವರ ಮಗ ಅರುಣ್ ಸಾವಿಗೆ ಸೇಡು ತೀರಿಸಿಕೊಳ್ಳಲು ಈ ಕೊಲೆ ಮಾಡಿದ್ದಾರೆ ಎಂದು ರತನ್ ಕುಟುಂಬ ಆರೋಪಿಸಿದೆ. ಮೇ 15 ರಂದು, ಅರುಣ್ ತನ್ನ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ, ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ ಅವರನ್ನು ಕೊಂದಿದ್ದರು. ಅರುಣ್ ಸಾವಿನ ಪ್ರಕರಣದಲ್ಲಿ ರತನ್ ಅವರ ಹಿರಿಯ ಮಗ ದೀಪಕ್ ಅವರನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಜಾಗದ ವಿಚಾರಕ್ಕೆ ನಡೀತು ಬರ್ಬರ ಕೊಲೆ: ತೋಟದಲ್ಲೇ ಹರಿದ ನೆತ್ತರು

ರತನ್ ಅವರ ಮಗಳು ನೀಡಿರುವ ಮಾಹಿತಿ ಪ್ಕಾರ, ರಾಂಭೀರ್ ಮತ್ತು ಅವರು ತಮ್ಮ ತಂದೆಗೆ ಬಹಳ ಸಮಯದಿಂದ ಬೆದರಿಕೆ ಹಾಕಿದರು, ತಮ್ಮ ತಂದೆಗೆ ಯಾರೊಬ್ಬರಿಗೂ ವೈಯಕ್ತಿಕ ದ್ವೇಷವಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *