ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ನವೀನ್ ಎಂಬವರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಇನ್ನೂ ಇದೆ. ನಂತರ ಆತನನ್ನು ಬಂಧಿಸಿದ್ದಾರೆ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಏತನ್ಮಧ್ಯೆ, ಸಚಿವರ ಕಚೇರಿಯಿಂದಲೇ ಚಿನ್ನ, ನಗದು ಇದ್ದ ಬ್ಯಾಗ್ ಎಂಬ ವದಂತಿ ಹರಡಿದೆ. ಈ ವಿಚಾರವಾಗಿ ಸಚಿವರ ಕಚೇರಿಯಲ್ಲಿ ಸ್ಪಷ್ಟನೆ ನೀಡಿದ್ದು, ಕಚೇರಿಯಲ್ಲಿ ಎಲ್ಲೂ ಕಳ್ಳತನವಾಗಿಲ್ಲ ಎಂದು ದೃಢಪಡಿಸಿದ್ದಾರೆ. ವ್ಯಕ್ತಿಯೊಬ್ಬರು ವಿಧಾನಸೌಧದ ಪಡಸಾಲೆಯಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಭದ್ರತಾ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕಚೇರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 10:09 am, ಮಂಗಳವಾರ, 10 ಫೆಬ್ರವರಿ 26