ಮಂಗಳೂರು, ನವೆಂಬರ್ 25: ಮಂಗಳೂರು ಬಜ್ಪೆ ಪೊಲೀಸ್ ಠಾಣಾ ಚಿತ್ರ ತಲ್ವಾರ್ ಅಖಿಲೇಶ್ ಎಂಬ ಯುವಕನ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರ ಗ್ಯಾಂಗ್ ತಲ್ವಾರ್ ದಾಳಿ ಮಾಡಿದೆ. ಅಖಿಲೇಶ್ಗೆ ಸದ್ಯ ಮೂಡಬಿದಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ಮಾಡಿ ಪರಾರಿಯಾಗುವಾಗ ಒಬ್ಬ ಆರೋಪಿ ಸಿನಾನ್ ಎಂಬಾತ ಬಾಕಿಯಾಗಿದ್ದಾನೆ. ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದ್ದಾನೆ. ಸಿಕ್ಕ ಸಿಕ್ಕ ವಾಹನಗಳನ್ನು ಬಲವಂತವಾಗಿ ಅಡ್ಡಹಾಕಿ ನಿಲ್ಲಿಸಲು ಯತ್ನಿಸಿದ್ದಾನೆ. ಆದರೆ ಯಾರು ಕೂಡ ವಾಹನ ನಿಲ್ಲಿಸಿಲ್ಲ. ಒಬ್ಬ ಬೈಕ್ ಸವಾರ ಈತನ ಪುಂಡಾಟದಿಂದ ಗಾಬರಿಯಾಗಿ ಬೈಕ್ ನಿಂದ ಬಿದ್ದ ಘಟನೆಯೂ ನಡೆದಿದೆ. ಕೊನೆಗೂ ಸಿನಾನ್ನನ್ನು ಸ್ಥಳೀಯರು ಹಿಡಿದಿದ್ಹೇಗೆ ಎಂಬ ಸಿಸಿಟಿವಿ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಝಳಪಿಸಿದ ತಲ್ವಾರ್, ಯುವಕನ ಮೇಲೆ ದಾಳಿ: ಶಾಂತಿಭಂಗದ ಆತಂಕ
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ