Headlines

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್


ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರ (ಮಾರ್ಕ್ ಕನ್ನಡ ಚಲನಚಿತ್ರ) ಪ್ರೀ-ರಿಲೀಸ್ ಇವೆಂಟ್. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (ಕಿಚ್ಚ ಸುದೀಪ್) ಹೇಳಿದ್ದಾರೆ. ಹಾಗದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ. ಎಲ್ಲಾ ವಿಷಯಗಳಿಗೆ ಸುದೀಪ್ ಅವರು ಈ ಸಂದರ್ಶನದಲ್ಲಿ (ಕಿಚ್ಚ ಸುದೀಪ್ ಸಂದರ್ಶನ) ಉತ್ತರ ಮಾಹಿತಿ.

ಪೈರಸಿ ಪದ ಬಳಸಿಲ್ಲ ಯಾಕೆ?

‘ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹಾಗಾದರೆ ಇಡೀ ಚಿತ್ರರಂಗ ರಿಯಾಕ್ಟ್ ಮಾಡಬೇಕಿಲ್ಲ. ಮೊದಲು ’45’ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ನಾನು ಹೇಳಿಕೆ ನೀಡಿದೆ. ಎಲ್ಲಿಂದ ಸೌಂಡು ಬರುತ್ತದೆ ಅಂತ ನೋಡಿದೆ. ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನಮ್ಮ ಮಾತಿಗೆ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆ ನೀಡಿದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. ಅಲ್ಲಿ ಮಾತನಾಡಿದ ನನಗೆ ಘನತೆ ಇಲ್ಲವಾ? 30 ವರ್ಷದಿಂದ ಜನರು ನನ್ನನ್ನು ನೋಡಿಲ್ಲವೇ? ಯಾವತ್ತಾದರೂ ನಾನು ತಪ್ಪಾದ ಹೇಳಿಕೆ ನೀಡಿದ್ದೆನಾ? ಯಾವುದಾದರೂ ಕಲಾವಿದರ ಬಗ್ಗೆ ತಪ್ಪಾಗಿ ಮಾತನಾಡಿದ್ದೇನಾ?’

ಆ ರೀತಿ ಮಾತಾಡಿದ್ದಕ್ಕೆ ಕಾರಣ?

‘ಅಂದು ನಾನು ಅಲ್ಲಿ ಮಾತನಾಡುವುದಕ್ಕೂ ಮುನ್ನ ನನಗೆ ಒಂದು ಫೋನ್ ಕರೆ ಬಂದಿತ್ತು. ದುಡ್ಡಿಗಾಗಿ ನಿಮ್ಮ ಸಿನಿಮಾವನ್ನು ಪೈರಸಿ ಮಾಡುತ್ತಿಲ್ಲ. ನಿಮ್ಮ ಸಿನಿಮಾವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ಪೈರಸಿ ಮಾಡಲಿದ್ದಾರೆ ಎಂಬ ಮಾಹಿತಿ ಬಂತು. ಅದರ ವಿರುದ್ಧ ನಾನು ನಿಂತುಕೊಳ್ಳದೆ ಮತ್ತೆ ಯಾರು ಬರಬೇಕು? ಅಂದು ನಾನು ನನ್ನ ಸಂಭ್ರಮವನ್ನು ನಿಲ್ಲಿಸಿ, ಆ ಮಾತನ್ನು ಹೇಳಿದೆ ಎಂದರೆ ಅರ್ಥ ಮಾಡಿಕೊಳ್ಳಿ. ಯಾರು ಕೇಳುತ್ತಿದ್ದಾರೋ ಅವರಿಗೆ ನಾನು ಆ ಮಾತನ್ನು ಹೇಳಬೇಕಿತ್ತು. ಅವರಿಗೆ ಅರ್ಥ ಆಗಿದೆ.’

ಆ ಮಾತು ಹೇಳಿದ್ದು ಯಾರಿಗೆ?

‘ಪ್ರಭುದ್ಧತೆ ಇಲ್ಲದೇ ಆವೇಷದಲ್ಲಿ ಏನೇನೋ ಮಾತಾಡುವವನು ನಾನಾಗಿದ್ದರೆ ಅನೇಕ ವಿವಾದಗಳಲ್ಲಿ ಸಿಕ್ಕಿಕೊಳ್ಳಬೇಕಿತ್ತು. ಬೇರೆಯವರ ಸಿನಿಮಾದಲ್ಲಿ ತಲೆ ಹಾಕುವ ಉದ್ದೇಶ ನನಗೆ ಇಲ್ಲ. ಇಂಥವರಿಗೆ ಹೇಳಿದ್ದು ಅಂತ ನಾನು ಹೇಳಿಲ್ಲ. ಅಷ್ಟು ಜನ ಕಲಾವಿದರು ಇದ್ದಾರೆ. ಎಲ್ಲರಿಗೂ ಸುದೀಪ್ ಗೊತ್ತು. ಅವರು ಯಾರೂ ಕೂಡ ಗಮನಿಸಿಲ್ಲ. ಯಾಕೆ ಹೇಳಿಲ್ಲ ಎಂಬುದು ನಿಮಗೆ ಗೊತ್ತು. ಬೇರೆ ಯಾರದ್ದೂ ಮಾತಿಗೆ ನಾನು ಯಾಕೆ ಪ್ರತಿಕ್ರಿಯಿಸಿದ್ದೇನೆ? ನನ್ನ ಹೆಸರು ಹೇಳಿ ಮಾತನಾಡಿದರೆ ನಾನು ಪ್ರತಿಕ್ರಿಯೆ ಕೊಡುತ್ತೇನೆ.

‘ನಮ್ಮ ಸಿನಿಮಾ ಕಾಪಾಡಿಕೊಳ್ಳುವುದು ನಮಗೆ ಮುಖ್ಯ. ನನಗೆ ಅಹಂ ಇಲ್ಲ. ಅದರ ಅವಶ್ಯಕತೆ ನನಗೆ ಇಲ್ಲ. ಸಿನಿಮಾ ಬಿಟ್ಟು ಬೇರೆ ವಿಚಾರಗಳ ಬಗ್ಗೆ ನಾನು ಕೇರ್ ಮಾಡಲ್ಲ. ನನ್ನದು ಸಿಂಪಲ್ ಜೀವನ. ದರ್ಶನ್ ಬಗ್ಗೆ ನೀವು ಬಂದು ಕೇಳಿದಾಗ ನಾನು ಇಂದಿನ ತನಕ ಕೆಟ್ಟದಾಗಿ ಮಾತನಾಡಿಲ್ಲ. ನಾನು ಯಾಕೆ ಯಾರಿಗಾದರೂ ಕೆಟ್ಟದ್ದು ಬಯಸಬೇಕು? ನನ್ನ ಸಿನಿಮಾವನ್ನು ಅದರ ಪಾಡಿಗೆ ಬಿಟ್ಟುಬಿಡಬಹುದಲ್ಲ. ಯಾರು ಮಾಡುತ್ತಿದ್ದಾರೋ ಅವರಿಗೆ ಹೇಳಿದ್ದೇನೆ. ಅದು ಅವರಿಗೆ ತಲುಪಿದೆ. ಅವರನ್ನು ನಾನು ಬಿಡಲ್ಲ.’

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥವೇನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಪೈರಸಿ ವಿರುದ್ಧ ನಿಮ್ಮ ಯುದ್ಧ ಹೇಗೆ?

‘ವಿವಾದ ಮಾಡಲು ನಾನು ಇಲ್ಲಿ ಬಂದಿಲ್ಲ. ನನಗೆ ಆಗಿರುವ ನೋವನ್ನು ತೆಗೆದುಕೊಳ್ಳಿ. ಪೈರಸಿ ವಿರುದ್ಧ ನಾವು ಏನು ಮಾಡುತ್ತಿದ್ದೇವೆ ಎಂದು ಈಗ ಹೇಳುತ್ತಿಲ್ಲ. ಪ್ರಯತ್ನ ಮಾಡುತ್ತಿದ್ದೇನೆ. ಯಶಸ್ವಿ ಆಗುತ್ತೇನೋ ಇಲ್ಲವೋ ಗೊತ್ತಿಲ್ಲ. ಯಶಸ್ವಿಯಾದರೆ ಪೈರಸಿ ಜಾಲವನ್ನು ಶೇಕಡ 80ರಷ್ಟು ಅಂತ್ಯಗೊಳಿಸುತ್ತೇವೆ. ಅದಕ್ಕಾಗಿ ಸರ್ಕಾರದಿಂದ ದೊಡ್ಡ ದೊಡ್ಡ ವ್ಯಕ್ತಿಗಳ ಸಹಾಯ ಕೇಳಿದ್ದೇವೆ. ಅದಕ್ಕೆ ಸಹಕಾರ ಕೊಟ್ಟಿದ್ದಾರೆ.’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *