ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ



ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ
<p>ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕಲ್ಲಿನ ಕ್ವಾರಿಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಹೊಲ, ದನದ ಕೊಟ್ಟಿಗೆ ಮತ್ತು ಮರಗಳಿಗೆ ಹಾನಿಯಾಗಿದೆ. ಘಟನೆಯಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದು ಕ್ರಮಕ್ಕೆ ಒತ್ತಾಯಿಸಿದ್ದಾರೆ.</p><img><p>ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ಸದ್ದಿಗೆ ಹಳಿಯಾಳದ ಜನ ಬೆಚ್ಚಿ ಬಿದ್ದಿದ್ದಾರೆ. ಹಳಿಯಾಳದ ಕಲ್ಲಿನ ಕ್ವಾರಿಯಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಅಕ್ಕಪಕ್ಕದ ಹೊಲಗಳು ದನದ ಕೊಟ್ಟಿಗೆಗಳಿಗೆ ಹಾನಿಯಾಗಿದೆ</p><img><p>ಹಳಿಯಾಳದ ಕಲ್ಲಿನ ಕ್ವಾರಿಯಲ್ಲಿ ಸ್ಫೋಟ ನಡೆಸುವ ಮುನ್ನ ಕೆಂಪು ಫ್ಲಾಗ್‌ಗಳನ್ನು ಬಳಸದೇ ಭಾರೀ ಪ್ರಮಾಣದ ಸ್ಫೋಟ ನಡೆಸಿದ ಆರೋಪ ಕೇಳಿ ಬಂದಿದೆ. ಖಾಸಗಿ ವ್ಯಕ್ತಿಗಳಿಂದ ಭೂಮಿ ಲೀಸ್ ಪಡೆದು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಸ್ಫೋಟಕ ಬಳಸಿ ಕಲ್ಲು ಒಡೆಯುವ ಕೆಲಸ ನಡೆಸಲಾಗಿದೆ.</p><img><p>ಭಾರಿ ಪ್ರಮಾಣದ ಸ್ಫೋಟಕ ಬಳಕೆಯಿಂದ ಕಲ್ಲಿನ ಕ್ವಾರಿ ಇರುವ ಸ್ಥಳದ ಅಕ್ಕಪಕ್ಕದಲ್ಲಿರುವ ಹೊಲ, ದನದ ಕೊಟ್ಟಿಗೆಗಳು ಮತ್ತು ಮರಗಳ ಮೇಲೆ ಕಲ್ಲುಗಳು ಬಿದ್ದು ಹಾನಿಯಾಗಿದೆ.</p><img><p>ರಾಜು ಲೊಂಡಿ ಎಂಬುವವರ ಹೊಲದಲ್ಲಿದ್ದ ದನದ ಕೊಟ್ಟಿಗೆ ಹಾಗೂ ಮಾವಿನ ಮರಗಳ ಮೇಲೆ ಕಲ್ಲುಗಳು ಹಾರಿ ಬಂದು ಬಿದ್ದಿದ್ದು, ಅವರಿಗೆ ಇದರಿಂದ ಅಪಾರ ಪ್ರಮಾಣದ ಆರ್ಥಿಕ ಹಾನಿಯಾಗಿದೆ. ಅಕ್ಕ ಪಕ್ಕದ ಮನೆ ಹಾಗೂ ಹೊಲಗಳಲ್ಲೂ ಕಲ್ಲುಗಳು ಬಿದ್ದು ಹಾನಿಯಾಗಿವೆ.</p><img><p>ವಿಚಾರ ತಿಳಿದು ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದ್ದು, ಗಣಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವುದಕ್ಕೆ ಸೂಚನೆ ನೀಡಲಾಗಿದೆ.</p><p><strong>ಇದನ್ನೂ ಓದಿ: </strong><strong>ಇರಾನ್ ಮೇಲೆ ಅಮೆರಿಕಾ ಇಸ್ರೇಲ್ ದಾಳಿಯಿಂದ ಜಗತ್ತಿನ ಬೇರೆ ದೇಶಗಳು ಅನುಭವಿಸುತ್ತಿರುವ ಹಾನಿ ಎಷ್ಟು?</strong></p><img><p>ಭಾರೀ ಸ್ಫೋಟದಿಂದ ಆತಂಕದಲ್ಲಿರುವ ಜನರು ಕೂಡಲೇ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.</p><p><strong>ಇದನ್ನೂ ಓದಿ: </strong><strong>ಇಸ್ರೇಲ್ ಅಮೆರಿಕಾ ರಾಯಭಾರಿಗಳ ವಜಾ ಮಾಡಿದರೆ ಮಾತ್ರ ಹರ್ಮುಜ್‌ನಲ್ಲಿ ಸಾಗಲು ಅವಕಾಶ: ಹಲವು ದೇಶಗಳಿಗೆ ಇರಾನ್ ಆಗ್ರಹ</strong></p>



Source link

Leave a Reply

Your email address will not be published. Required fields are marked *