ನವದೆಹಲಿ: ಇಸ್ರೇಲ್-ಇರಾನ್ ಯುದ್ಧದ ನಡುವೆ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ತೀವ್ರ ಕಳವಳದ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ, ಭಾರತ ಶಾಂತಿ ಮತ್ತು ಸ್ಥಿರತೆಗಾಗಿ ವಿನಂತಿಸುತ್ತಲೇ ಇದೆ ಎಂದು ಅವರು ಹೇಳಿದ್ದಾರೆ. ಇಂದು ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಒಮನ್ನಲ್ಲಿ ಭಾರತೀಯ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸುವುದರ ಜೊತೆಗೆ ಭಾರತ ಯಾವಾಗಲೂ ನಿಲುವು ತಳೆದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವಾದ್ಯಂತ ನಡೆಯುತ್ತಿರುವ ಅನೇಕ ಉದ್ವಿಗ್ನತೆಗಳ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ. ನಾವು ಯಾವಾಗಲೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕರೆ ನೀಡಿದ್ದೇವೆ ಎಂದು ಅವರು ಹೇಳಿದರು.
ಇದನ್ನೂ ಓದಿ: ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ
ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯಿಂದ ತೊಂದರೆಗೊಳಗಾದ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಹಲವಾರು ದೇಶಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮೋದಿ ಹೇಳಿದ್ದಾರೆ.
ಇದಕ್ಕೂ ಮೊದಲು, ಪ್ರಧಾನಿ ಮೋದಿ ಇಸ್ರೇಲ್ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಮಯದಲ್ಲಿ, ಪ್ರಧಾನಿ ಮೋದಿ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸುವಂತೆ ಕರೆ ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನು ಪ್ರಕಟಿಸಲಾಯಿತು. ನಾಗರಿಕರ ಸುರಕ್ಷತೆಯು ಮೊದಲ ಆದ್ಯತೆ ಎಂದು ಅವರು ಒತ್ತಿ ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ