ಬೆಂಗಳೂರು/ದಾವಣೆಗೆರೆ, (ಡಿಸೆಂಬರ್ 14): ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.
1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ 6 ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪರ ರಾಜಕೀಯ ಸೇವೆ ಅಪಾರ. ಮದ್ಯ ಕರ್ನಾಟಕದ ಪಾಲಿಗೆ ತ್ರಿವಿಕ್ರಮ. ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯರಾಗಿದ್ದಾರೆ. ಇನ್ನು ಮದ್ಯ ಕರ್ನಾಟಕದಲ್ಲಿ ಶಮನೂರು ಸಾಮ್ರಾಜ್ಯ ಹೇಗಿದೆ ನೋಡಿ.