ಬೆಂಗಳೂರು, ಫೆಬ್ರವರಿ 18): ವಿವಿಧ ನಾಳೆ ಬೇಡಿಕೆ ಸಲ್ಲಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (ಸಾರಿಗೆ ನೌಕರರು) ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಕೊಂಚ ನೀಡಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (ಕಾಂಗ್ರೆಸ್ ಸರ್ಕಾರ) ಸ್ವಲ್ಪ ಸಂದಿದೆ. ಸಾರಿಗೆ ಸಚಿವ ರಾಮರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದು, ಅಂತಿಮವಾಗಿ ನೌಕರರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ರಾಮಲಿಂಗಾ ರೆಡ್ಡಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.