
ಬೆಂಗಳೂರು, (ಮಾರ್ಚ್ 18): ಕರ್ನಾಟಕದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳನ್ನು ಹಾಕುವ ಡಿಜೆ (ಡಿಜೆ) ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್ ಕಾಣಿಸಿಕೊಂಡಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡಿಜೆ ಬಳಕೆ ನಿಷೇಧಿಸಿ ಎಂದ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟ ಬಿಜೆಪಿ ಸದಸ್ಯ ಚನ್ನಬಸಪ್ಪ ಡಿಜೆ ಮಾತ್ರ ಏಕೆ ನಿಷೇಧಿಸಬೇಕು, ಸುಪ್ರೀಂ ಕೋರ್ಟ್ ಆದೇಶದಂತೆ ಆಝಾನ್ ಬ್ಯಾನ್ ಮಾಡ್ತಿರಾ ಎಂದು ತಿರುಗೇಟು ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಖಾದರ್ ಸುಪ್ರೀಂ ಆದೇಶ ಶಬ್ಧದ ಪ್ರಮಾಣಕ್ಕೆ ಸಂಬಂಧಿಸಿದ್ದು, ಒಂದು ವೇಳೆ ಸರ್ಕಾರ ಆದೇಶ ನೀಡಿದ್ರೆ ಪಾಲನೆ ಮಾಡಬೇಕು ಎಂದು ಹೇಳಿದರು.
ಬಳಿಕ ಡಿಜೆ ಬ್ಯಾನ್ ಮಾಡುವ ಸಂಬಂಧ ಸಚಿವರಾದ ಶಿವರಾಜ್ ತಂಗಡಿಗಿ ಹಾಗೂ ಪ್ರಿಯಾಂಕ್ ಖರ್ಗೆ ಸಹ ಪ್ರಸ್ತಾಪಿಸಿದ್ದು, ಬಿಜೆಪಿ ನಾಯಕರು ಬ್ಯಾನ್ ಮಾಡಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಕಾರಣವಾಯಿತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.