ಬೆಳಗಾವಿ, ನವೆಂಬರ್ 03: ಕಾಂಗ್ರೆಸ್ ಆಂತರಿಕ ಸಮಸ್ಯೆಯ ಬಗ್ಗೆ ನಾವು ತಲೆಕೆಡಿಸಿಕೊಳ್ಳಬಾರದು. ಅಲ್ಲಿ ಯಾರು ಏಕನಾಥ ಸಿಂಧೆ, ಅಜಿತ್ ಪವಾರ್ ಆಗಲ್ಲ. ಬದಲಾಗಿ ಸರ್ಕಾರ ಇನ್ನೂ ಮುಂದುವರಿದರೆ ನಮಗೆ ಅನುಕೂಲ ಆಗಲಿದೆ. ನಾವು ವಿರೋಧ ಪಕ್ಷದ ಕೆಲಸವನ್ನು ಸರಿಯಾಗಿ ಮಾಡಬೇಕಾಗಿದೆ ಎಂದು ಬೆಳಗಾವಿ ಶಾಸಕ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುತ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಕ್ರಾಂತಿ ಆಗಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ ಅಥವಾ ಯಾರನ್ನಾದ್ರೂ ಸಿಎಂ ಮಾಡಲಿ. ಹೋರಾಟ ಮಾಡಲು ನಮಗೆ ಸಾಕಷ್ಟು ವಿಷಯಗಳಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.