ಬೆಳಗಾವಿ, ಡಿಸೆಂಬರ್ 09: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಮಾಡಿದ ಪೋಸ್ಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಡಿಕೆಶಿ ಅವರನ್ನು ಸ್ವಾಗತಿಸುವ ಸಂದರ್ಭ ಈ ಪೋಸ್ಟ್ ವಿಧಾನ ಸಭೆಯಲ್ಲೂ ಸದ್ದು ಮಾಡಿದೆ. ಮೊದಲು, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಎಂದು ಪೋಸ್ಟ್ ಮಾಡಲಾಗಿದೆ. ಈ ವಿಚಾರ ಸುದ್ದಿ ಆಗುತ್ತಿದ್ದಂತೆಯೇ, ತಕ್ಷಣವೇ ಪೋಸ್ಟ್ ಅನ್ನು ತಿದ್ದುಪಡಿ ಮಾಡಿ ಉಪಮುಖ್ಯಮಂತ್ರಿ ಎಂದು ಬದಲಾಯಿಸಲಾಗಿದೆ. ಈ ಕುರಿತು ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ, ಇದು ತಮ್ಮ ಸಾಮಾಜಿಕ ಜಾಲತಾಣದ ಹ್ಯಾಂಡ್ಲರ್ ಮಾಡಿದ ಟೈಪಿಂಗ್ ಎರರ್ ಎಂದು ಸ್ಪಷ್ಟಪಡಿಸಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.